ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್ಆರ್ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm