ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.
ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm