ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.

ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm