ಬ್ರೇಕಿಂಗ್ ನ್ಯೂಸ್
18-02-25 10:49 pm HK News Desk ದೇಶ - ವಿದೇಶ
ಪಾಟ್ನಾ, ಫೆ.19 : ಆತ ಇಬ್ಬರು ಹೆಂಡಿರ ಮುದ್ದಿನ ಪತಿರಾಯ. 25 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದ ಈ ವ್ಯಕ್ತಿ ಕಳೆದ 7 ವರ್ಷದ ಹಿಂದೆ ಮೊದಲ ಪತ್ನಿಗೆ ಗೊತ್ತಾಗದಂತೆ ಗುಟ್ಟಾಗಿ ಎರಡನೇ ಮದುವೆ ಆಗಿದ್ದ. ವಿಷಯ ತಿಳಿದು ಮೊದಲ ಹೆಂಡತಿ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಕ್ಕಟ್ಟಿಗೆ ಸಿಲುಕಿದ್ದ.
ಹೌದು, ಬಿಹಾರದಲ್ಲಿ ಬೆಳಕಿಗೆ ಬಂದಿರುವ ಈ ವಿಚಿತ್ರ ಪ್ರಕರಣವೀಗ ದೇಶದ ಗಮನ ಸೆಳೆದಿದೆ. ಇದು ಒಬ್ಬನೇ ಗಂಡನನ್ನು ಇಬ್ಬರು ಪತ್ನಿಯರು ಹಂಚಿಕೊಂಡಿರುವ ಅಪರೂಪದ ಪ್ರಸಂಗ. ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರ ನೀಡಿರುವ ಒಪ್ಪಂದದ ಪ್ರಕಾರ, ಪತಿರಾಯ ಮೊದಲ ಹೆಂಡತಿ ಬಳಿ ವಾರದಲ್ಲಿ ನಾಲ್ಕು ದಿನ ಮತ್ತು ಎರಡನೇ ಹೆಂಡತಿ ಬಳಿ ಮೂರು ದಿನಗಳ ಕಾಲ ಸಂಸಾರ ನಡೆಸಬೇಕಾಗಿದೆ.
ಮೊದಲ ಪತ್ನಿ ಪೂರ್ಣಿಮಾ ಗಂಡನ ನಡೆಯಿಂದ ಬೇಸತ್ತು ಪೂರ್ನಿಯಾ ಪೊಲೀಸ್ ಠಾಣೆ ಕಚೇರಿಗೆ ತೆರಳಿ, ತನ್ನ ಪತಿ ಶಂಕರ್ ವಿರುದ್ಧ ದೂರು ನೀಡಿದ್ದರು. ತಾವಿಬ್ಬರು 2000ನೇ ಇಸ್ವಿಯಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ನನಗೆ ಗೊತ್ತಾಗದಂತೆ ನನ್ನ ಗಂಡ ಉಷಾ ದೇವಿ ಎಂಬವಳನ್ನ ಎರಡನೇ ಮದುವೆಯಾಗಿದ್ದಾನೆ ಎಂದು ಎಸ್ಪಿ ಎದುರು ಅಳಲು ತೋಡಿಕೊಂಡಿದ್ದರು.
ಶಂಕರ್ ಅವರ ಮೊದಲ ಪತ್ನಿ ಪೂರ್ಣಿಮಾ, ತನ್ನ ಪತಿ ಕುಟುಂಬದ ನಿರ್ವಹಣೆಗೆ ಹಣ ನೀಡುತ್ತಿಲ್ಲ. ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಅವರ ದೂರು ಆಲಿಸಿದ್ದು, ಈ ಕುರಿತಂತೆ ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರದಲ್ಲಿ ದೂರು ನೀಡುವಂತೆ ಸೂಚಿಸಿ, ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು ಎಂದು ಎಸ್ಪಿ ಕಾರ್ತಿಕೇಯಾ ಶರ್ಮಾ ಮಾಹಿತಿ ನೀಡಿದ್ದಾರೆ.
A beloved husband of two wives, husband now victim of the wives quarrel in patna.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm