ಬ್ರೇಕಿಂಗ್ ನ್ಯೂಸ್
19-02-25 11:00 pm HK News Desk ದೇಶ - ವಿದೇಶ
ನವದೆಹಲಿ, ಫೆ.19: ದೆಹಲಿಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಬಿಜೆಪಿ ಸಿಎಂ ಹುದ್ದೆಗೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದೆ. ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಮೊದಲ ಬಾರಿ ಶಾಸಕಿಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ 1998ರಲ್ಲಿ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಬಿಜೆಪಿ ಮುಖ್ಯಮಂತ್ರಿಯಾಗಿದ್ದರು.
ಇದೀಗ ದೆಹಲಿಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಬಿಜೆಪಿಗೆ ಮತ್ತೊಬ್ಬ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ. ಅಂದಹಾಗೆ, ರೇಖಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಸುಷ್ಮಾ ಸ್ವರಾಜ್, ಆನಂತರ ಕಾಂಗ್ರೆಸಿನ ಶೀಲಾ ದೀಕ್ಷಿತ್, ಆಪ್ ಪಕ್ಷದಿಂದ ನಾಲ್ಕು ತಿಂಗಳ ಹಿಂದೆ ಆತಿಷಿ ಮುಖ್ಯಮಂತ್ರಿಯಾಗಿದ್ದರು. ಇದೀಗ ಮತ್ತೊಬ್ಬ ಮಹಿಳೆ ರೇಖಾ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ದೇಶದ 18 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ, ಯಾವುದೇ ಕಡೆ ಮಹಿಳಾ ಮುಖ್ಯಮಂತ್ರಿ ಇಲ್ಲ. ಇದೀಗ ರೇಖಾ ಗುಪ್ತಾ ಅವರನ್ನು ಸಿಎಂ ಸ್ಥಾನಕ್ಕೇರಿಸಿ ಆ ಅಪವಾದವನ್ನು ಹೋಗಲಾಡಿಸಿದೆ. ಉಳಿದಂತೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಬ್ಬ ಮಹಿಳೆಯಾಗಿ ಅಧಿಕಾರ ನಡೆಸುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಗಾದಿಗೆ ಹಲವರು ಆಕಾಂಕ್ಷಿಗಳಾಗಿದ್ದರು. ಮಹಿಳಾ ಕೋಟಾದಿಂದಲೇ ನಾಲ್ಕು ಮಂದಿ ಪ್ರಬಲ ಲಾಬಿ ನಡೆಸುತ್ತಿದ್ದರು. ವೀಕ್ಷಕರಾಗಿ ರವಿಶಂಕರ್ ಪ್ರಸಾದ್ ಮತ್ತು ಓಂಪ್ರಕಾಶ್ ಧನ್ಕರ್, 48 ಮಂದಿ ಶಾಸಕರ ಸಭೆಯ ಬಳಿಕ ಮಾಹಿತಿಯನ್ನು ಕೇಂದ್ರಕ್ಕೆ ರವಾನಿಸಿದ್ದರು. ಆನಂತರ, ಕೇಂದ್ರೀಯ ಸಂಸದೀಯ ಸಮಿತಿ ಅಳೆದು ತೂಗಿ ರೇಖಾ ಗುಪ್ತಾರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಫೆ.20ರಂದು ಬೆಳಗ್ಗೆ ಹತ್ತಕ್ಕೆ ರಾಮಲೀಲಾ ಮೈದಾನದಲ್ಲಿ ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
he Delhi government will be led by a woman Chief Minister again as the BJP zeroed in Rekha Gupta, its first-time MLA from Shalimar Bagh, for the Chief Minister's post. The decision was taken at a meeting of the party's legislature party this evening. Ms Gupta succeeds Aam Aadmi Party's Atishi after the BJP ended the 10-year-rule of Arvind Kejriwal's party in the recently concluded assembly election.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm