ಬ್ರೇಕಿಂಗ್ ನ್ಯೂಸ್
19-02-25 11:00 pm HK News Desk ದೇಶ - ವಿದೇಶ
ನವದೆಹಲಿ, ಫೆ.19: ದೆಹಲಿಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಬಿಜೆಪಿ ಸಿಎಂ ಹುದ್ದೆಗೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದೆ. ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಮೊದಲ ಬಾರಿ ಶಾಸಕಿಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ 1998ರಲ್ಲಿ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಬಿಜೆಪಿ ಮುಖ್ಯಮಂತ್ರಿಯಾಗಿದ್ದರು.
ಇದೀಗ ದೆಹಲಿಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಬಿಜೆಪಿಗೆ ಮತ್ತೊಬ್ಬ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ. ಅಂದಹಾಗೆ, ರೇಖಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿಂದೆ ಸುಷ್ಮಾ ಸ್ವರಾಜ್, ಆನಂತರ ಕಾಂಗ್ರೆಸಿನ ಶೀಲಾ ದೀಕ್ಷಿತ್, ಆಪ್ ಪಕ್ಷದಿಂದ ನಾಲ್ಕು ತಿಂಗಳ ಹಿಂದೆ ಆತಿಷಿ ಮುಖ್ಯಮಂತ್ರಿಯಾಗಿದ್ದರು. ಇದೀಗ ಮತ್ತೊಬ್ಬ ಮಹಿಳೆ ರೇಖಾ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ದೇಶದ 18 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ, ಯಾವುದೇ ಕಡೆ ಮಹಿಳಾ ಮುಖ್ಯಮಂತ್ರಿ ಇಲ್ಲ. ಇದೀಗ ರೇಖಾ ಗುಪ್ತಾ ಅವರನ್ನು ಸಿಎಂ ಸ್ಥಾನಕ್ಕೇರಿಸಿ ಆ ಅಪವಾದವನ್ನು ಹೋಗಲಾಡಿಸಿದೆ. ಉಳಿದಂತೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಬ್ಬ ಮಹಿಳೆಯಾಗಿ ಅಧಿಕಾರ ನಡೆಸುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಗಾದಿಗೆ ಹಲವರು ಆಕಾಂಕ್ಷಿಗಳಾಗಿದ್ದರು. ಮಹಿಳಾ ಕೋಟಾದಿಂದಲೇ ನಾಲ್ಕು ಮಂದಿ ಪ್ರಬಲ ಲಾಬಿ ನಡೆಸುತ್ತಿದ್ದರು. ವೀಕ್ಷಕರಾಗಿ ರವಿಶಂಕರ್ ಪ್ರಸಾದ್ ಮತ್ತು ಓಂಪ್ರಕಾಶ್ ಧನ್ಕರ್, 48 ಮಂದಿ ಶಾಸಕರ ಸಭೆಯ ಬಳಿಕ ಮಾಹಿತಿಯನ್ನು ಕೇಂದ್ರಕ್ಕೆ ರವಾನಿಸಿದ್ದರು. ಆನಂತರ, ಕೇಂದ್ರೀಯ ಸಂಸದೀಯ ಸಮಿತಿ ಅಳೆದು ತೂಗಿ ರೇಖಾ ಗುಪ್ತಾರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಫೆ.20ರಂದು ಬೆಳಗ್ಗೆ ಹತ್ತಕ್ಕೆ ರಾಮಲೀಲಾ ಮೈದಾನದಲ್ಲಿ ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
he Delhi government will be led by a woman Chief Minister again as the BJP zeroed in Rekha Gupta, its first-time MLA from Shalimar Bagh, for the Chief Minister's post. The decision was taken at a meeting of the party's legislature party this evening. Ms Gupta succeeds Aam Aadmi Party's Atishi after the BJP ended the 10-year-rule of Arvind Kejriwal's party in the recently concluded assembly election.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm