ಬ್ರೇಕಿಂಗ್ ನ್ಯೂಸ್
21-02-25 12:17 pm HK News Desk ದೇಶ - ವಿದೇಶ
Photo credits : Money Control
ನವದೆಹಲಿ, ಫೆ.21: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಜಗತ್ತಿನ ಅತಿ ಸಿರಿವಂತ ಉದ್ಯಮಿ ಎಲಾನ್ ಮಸ್ಕ್ ಅವರನ್ನು ಅಮೆರಿಕದಲ್ಲಿ ಭೇಟಿಯಾದ ಬೆನ್ನಲ್ಲೇ ಟೆಸ್ಲಾ ಕಂಪನಿ ಭಾರತದಲ್ಲಿ ಮಾರುಕಟ್ಟೆ ವೃದ್ಧಿಗೆ ಮುಂದಾಗಿದೆ. ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಮುಂದಿನ ಏಪ್ರಿಲ್ ವೇಳೆಗೆ ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳನ್ನ ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಯೋಜನೆ ಹಾಕಿದೆ.
ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಟೆಸ್ಲಾ ಕಂಪನಿಗೆ ಮಾರುಕಟ್ಟೆ ಇದ್ದರೂ, ಭಾರತದಲ್ಲಿ ಹೆಜ್ಜೆ ಇಡಲು ಸಾಧ್ಯವಾಗಿರಲಿಲ್ಲ. ಇದೀಗ ರಿಟೇಲ್ ಉದ್ಯಮಕ್ಕಿಳಿದಿರುವ ಟೆಸ್ಲಾ ಕಂಪನಿಯು ತನ್ನ ಬರ್ಲಿನ್ ಪ್ಲ್ಯಾಂಟ್ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಮುಂಬೈನ ಬಾಂದ್ರಾನಲ್ಲಿ ಮತ್ತು ದೆಹಲಿಯ ಏರೋಸಿಟಿಯಲ್ಲಿ ಶೋರೂಮ್ ಸ್ಥಾಪಿಸಲು ಸ್ಥಳಗಳನ್ನು ಗುರುತಿಸಿದೆ. ಆದ್ರೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸುವ ಯೋಜನೆ ಟೆಸ್ಲಾ ಸದ್ಯಕ್ಕೆ ಹೊಂದಿಲ್ಲ ಎನ್ನಲಾಗುತ್ತಿದೆ.
ತನ್ನ ಕಂಪನಿಯ ಆಕರ್ಷಕ ಕಾರುಗಳನ್ನು ಭಾರತೀಯ ಮಾರುಕಟ್ಟೆಗೆ ಇಳಿಸಲು ಮುಂದಾಗಿರುವ ಟೆಸ್ಲಾ ಆರಂಭದಲ್ಲಿ 25,000 ಡಾಲರ್ (ಸುಮಾರು 22 ಲಕ್ಷ ರೂ.) ಆರಂಭಿಕ ಬೆಲೆಯ ಕಾರುಗಳನ್ನು ಮಾರಾಟಕ್ಕಿಳಿಸಲು ಪ್ಲ್ಯಾನ್ ಮಾಡಿದೆ. ಇದರೊಂದಿಗೆ 2025ರ ಅಂತ್ಯದ ವೇಳೆಗೆ 1 ಶತಕೋಟಿ ವಹಿವಾಟು ನಡೆಸುವ ಗುರಿ ಇರಿಸಿಕೊಂಡಿದೆ.
ಅಮೆರಿಕದಲ್ಲಿ ಮೋದಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುತ್ತಲೇ ಟೆಸ್ಲಾ ಆಟೋಮೊಬೈಲ್ ಸಂಸ್ಥೆಯು ಭಾರತದಲ್ಲಿ ನೇಮಕಾತಿಯನ್ನು ಆರಂಭಿಸಿದೆ. ಟೆಸ್ಲಾ ಕಂಪನಿಯು ಗ್ರಾಹಕ ಸಂಪರ್ಕ ಮತ್ತು ಆಡಳಿತ ಸೇರಿದಂತೆ ಒಟ್ಟು 13 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮುಂಬೈ ಮತ್ತು ದೆಹಲಿ ಕೇಂದ್ರಿತ ನೇಮಕಾತಿಗಳಿಗೆ ಟೆಸ್ಲಾ ಮುಂದಡಿ ಇಟ್ಟಿದೆ. ಇನ್ನೆರಡು ವರ್ಷಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಟೆಸ್ಲಾ ಶೋರೂಮ್ ಓಪನ್ ಆಗಲಿದೆ.
Tesla has started recruiting in India, hinting at its plans to enter the country’s electric vehicle (EV) market. This follows Tesla CEO Elon Musk and Prime Minister Narendra Modi’s meeting during the latter’s recent trip to the United States.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm