ಬ್ರೇಕಿಂಗ್ ನ್ಯೂಸ್
23-02-25 11:22 pm HK News Desk ದೇಶ - ವಿದೇಶ
ನವದೆಹಲಿ, ಫೆ. 23 : ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾಟದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದ್ದು ಪಾಕ್ ಪಡೆಯನ್ನು ಚಾಂಪಿಯನ್ಸ್ ಟೂರ್ನಿಯಿಂದಲೇ ಹೊರದಬ್ಬಿದೆ. 45 ಎಸೆತಗಳು ಬಾಕಿ ಇರುವಂತೆಯೇ ವಿರಾಟ್ ಕೊಹ್ಲಿಯ ಭರ್ಜರಿ ಶತಕದ ನೆರವಿನಿಂದ ಭಾರತವು 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿದೆ.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಬಾಬರ್ ಆಜಂ (23 ರನ್) ಮತ್ತು ಇಮಾಮ್ ಉಲ್ ಹಕ್ (10 ರನ್) ಇಬ್ಬರೂ ಬೇಗನೆ ಪೆವಿಲಿಯನ್ ಸೇರಿಕೊಂಡಿದ್ದು ದುಬಾರಿಯಾಗಿತ್ತು. ಬಾಬರ್ ಆಜಂ ಹಾರ್ದಿಕ್ ಪಾಂಡ್ಯಾ ಎಸೆತಕ್ಕೆ ಔಟ್ ಆದರೆ, ಇಮಾಮ್ ಉಲ್ ಹಕ್ ರನ್ನು ಅಕ್ಸರ್ ಪಟೇಲ್ ಅದ್ಭುತವಾಗಿ ರನೌಟ್ ಮಾಡಿದರು. ಬಳಿಕ ಆಡಲಿಳಿದ ಸೌದ್ ಶಕೀಲ್ (62 ರನ್) ಮತ್ತು ನಾಯಕ ಮಹಮದ್ ರಿಜ್ವಾನ್ (46 ರನ್) ಉತ್ತಮ ಜೊತೆಯಾಟ ನೀಡಿ 3ನೇ ವಿಕೆಟ್ ಗೆ 104 ರನ್ ಸೇರಿಸಿದರು. ಈ ಪೈಕಿ ಸೌದ್ ಶಕೀಲ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಧಾರವಾದರು.
ಇವರು ಔಟಾದ ಬಳಿಕ ಪಾಕಿಸ್ತಾನ ತಂಡಕ್ಕೆ ಆಸರೆ ಸಿಗಲಿಲ್ಲ. ಕುಶ್ದಿಲ್ ಶಾ 38 ರನ್ ಗಳಿಸಿ ಪಾಕ್ ಇನ್ನಿಂಗ್ಸ್ ಗೆ ಜೀವ ತುಂಬಲೆತ್ನಿಸಿದರೂ ಇತರ ಆಟಗಾರರಿಂದ ಸಾಥ್ ಸಿಗಲಿಲ್ಲ. ಕೊನೆಗೆ, 49.4 ಓವರ್ ನಲ್ಲಿ ಪಾಕಿಸ್ತಾನ 241 ರನ್ ಗಳಿಗೆ ಆಲೌಟಾಯಿತು. ಭಾರತದ ಪರ ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯಾ 2, ಹರ್ಷಿತ್ ರಾಣಾ, ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.
ಇದನ್ನು ಬೆನ್ನತ್ತಿದ ಭಾರತವು ಕೊಹ್ಲಿ ಅವರ ಅಮೋಘ ಶತಕದ ನೆರವಿನಿಂದ ಸುಲಭವಾಗಿ ಗುರಿ ಮುಟ್ಟಿತು. ಆಮೂಲಕ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಪಾಕಿಸ್ತಾನವನ್ನು ಭಾರತ ಲೀಗ್ ಹಂತದಲ್ಲೇ ಹೊರದಬ್ಬುವ ಮೂಲಕ ಹಳೆ ಬಾಕಿಯನ್ನು ತೀರಿಸಿದೆ. ಕೊಹ್ಲಿ ಮತ್ತು ಅಯ್ಯರ್ 3ನೇ ವಿಕೆಟ್ಗೆ 114 ರನ್ ಕಲೆಹಾಕುವ ಮೂಲಕ ಭಾರತದ ಗೆಲುವು ಬಹುತೇಕ ಖಚಿತವಾಗಿಸಿದರು. ವಿರಾಟ್ ಕೊಹ್ಲಿ ತಮ್ಮ 51ನೇ ಅಂತಾರಾಷ್ಟ್ರೀಯ ಏಕದಿನ ಶತಕವನ್ನು ಕೊನೆಯ ಎಸೆತದಲ್ಲಿ ಪೂರೈಸುವ ಜೊತೆಗೆ ಭಾರತಕ್ಕೆ ಗೆಲುವು ತಂದುಕೊಟ್ಟರು.
After plenty of will-he, won’t-he drama at the end, Virat Kohli got his century against Pakistan with a boundary that also helped India breeze past the target of 242 runs.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm