ಬ್ರೇಕಿಂಗ್ ನ್ಯೂಸ್
26-02-25 05:11 pm HK News Desk ದೇಶ - ವಿದೇಶ
ಕೊಯಮತ್ತೂರು, ಫೆ.26 : 2026ರಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ನಂತರ ಜನಸಂಖ್ಯೆ ಲೆಕ್ಕದಲ್ಲಿ ತಮಿಳುನಾಡು ಲೋಕಸಭೆ ಕ್ಷೇತ್ರಗಳ ಸಂಖ್ಯೆ 39ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ತಮಿಳುನಾಡಿಗೆ 5,08,337 ಕೋಟಿ ರೂ. ಅನುದಾನ ನೀಡಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದರು.
ಕ್ಷೇತ್ರ ವಿಂಗಡಣೆ ಬಳಿಕ ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯಗಳ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ. ಅಂತಹ ಭಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ 'ವೈಫಲ್ಯ'ದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. "ತಮಿಳುನಾಡಿನಲ್ಲಿ ರಾಷ್ಟ್ರ ವಿರೋಧಿ ಪ್ರವೃತ್ತಿ ಹೆಚ್ಚುತ್ತಿದ್ದು ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯಾಗಿದೆ" ಎಂದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಅಕ್ರಮ ಗಣಿ ಮಾಫಿಯಾಗಳು ರಾಜಕೀಯ, ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ನಡೆಸುತ್ತಿರುವ ಡಿಎಂಕೆ ಪಕ್ಷದ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
Union Home Minister Amit Shah on Wednesday launched a scathing attack on the ruling DMK government in Tamil Nadu, accusing its leaders of corruption and misgovernance.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm