ಬ್ರೇಕಿಂಗ್ ನ್ಯೂಸ್
26-02-25 05:11 pm HK News Desk ದೇಶ - ವಿದೇಶ
ಕೊಯಮತ್ತೂರು, ಫೆ.26 : 2026ರಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ನಂತರ ಜನಸಂಖ್ಯೆ ಲೆಕ್ಕದಲ್ಲಿ ತಮಿಳುನಾಡು ಲೋಕಸಭೆ ಕ್ಷೇತ್ರಗಳ ಸಂಖ್ಯೆ 39ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ತಮಿಳುನಾಡಿಗೆ 5,08,337 ಕೋಟಿ ರೂ. ಅನುದಾನ ನೀಡಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದರು.
ಕ್ಷೇತ್ರ ವಿಂಗಡಣೆ ಬಳಿಕ ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯಗಳ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ. ಅಂತಹ ಭಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ 'ವೈಫಲ್ಯ'ದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. "ತಮಿಳುನಾಡಿನಲ್ಲಿ ರಾಷ್ಟ್ರ ವಿರೋಧಿ ಪ್ರವೃತ್ತಿ ಹೆಚ್ಚುತ್ತಿದ್ದು ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯಾಗಿದೆ" ಎಂದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಅಕ್ರಮ ಗಣಿ ಮಾಫಿಯಾಗಳು ರಾಜಕೀಯ, ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ನಡೆಸುತ್ತಿರುವ ಡಿಎಂಕೆ ಪಕ್ಷದ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
Union Home Minister Amit Shah on Wednesday launched a scathing attack on the ruling DMK government in Tamil Nadu, accusing its leaders of corruption and misgovernance.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm