ಬ್ರೇಕಿಂಗ್ ನ್ಯೂಸ್
26-02-25 05:11 pm HK News Desk ದೇಶ - ವಿದೇಶ
ಕೊಯಮತ್ತೂರು, ಫೆ.26 : 2026ರಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ನಂತರ ಜನಸಂಖ್ಯೆ ಲೆಕ್ಕದಲ್ಲಿ ತಮಿಳುನಾಡು ಲೋಕಸಭೆ ಕ್ಷೇತ್ರಗಳ ಸಂಖ್ಯೆ 39ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ತಮಿಳುನಾಡಿಗೆ 5,08,337 ಕೋಟಿ ರೂ. ಅನುದಾನ ನೀಡಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದರು.
ಕ್ಷೇತ್ರ ವಿಂಗಡಣೆ ಬಳಿಕ ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯಗಳ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ. ಅಂತಹ ಭಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ 'ವೈಫಲ್ಯ'ದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. "ತಮಿಳುನಾಡಿನಲ್ಲಿ ರಾಷ್ಟ್ರ ವಿರೋಧಿ ಪ್ರವೃತ್ತಿ ಹೆಚ್ಚುತ್ತಿದ್ದು ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯಾಗಿದೆ" ಎಂದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಅಕ್ರಮ ಗಣಿ ಮಾಫಿಯಾಗಳು ರಾಜಕೀಯ, ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ನಡೆಸುತ್ತಿರುವ ಡಿಎಂಕೆ ಪಕ್ಷದ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
Union Home Minister Amit Shah on Wednesday launched a scathing attack on the ruling DMK government in Tamil Nadu, accusing its leaders of corruption and misgovernance.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm