ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm