ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.



ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm