ಬ್ರೇಕಿಂಗ್ ನ್ಯೂಸ್
26-02-25 05:38 pm HK News Desk ದೇಶ - ವಿದೇಶ
ನವದೆಹಲಿ, ಫೆ.26 : ಸುಡಾನ್ ಮಿಲಿಟರಿ ವಿಮಾನವೊಂದು ಜನವಸತಿ ಪ್ರದೇಶದಲ್ಲಿ ಪತನಗೊಂಡಿದ್ದು ಸ್ಥಳೀಯ ನಾಗರಿಕರು, ಅಧಿಕಾರಿಗಳು ಸೇರಿದಂತೆ 46 ಜನರು ಸಾವನ್ನಪ್ಪಿದ್ದಾರೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರ ಸಮೀಪದ ಓಮ್ದುರ್ಮನ್ ಎಂಬಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದೆ.
ಸುಡಾನ್ ಮಿಲಿಟರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಅಪಘಾತದಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸುಡಾನ್ ಸೇನಾ ವರದಿಯ ಪ್ರಕಾರ, ಸೇನೆಯ ಆಂಟೊನೊವ್ ವಿಮಾನ ವಾಡಿ ಸಯೆದ್ನಾ ವಾಯುನೆಲೆಯಿಂದ ಟೇಕಾಫ್ ಆಗುವಾಗ ಅಪಘಾತಕ್ಕೀಡಾಗಿದೆ. ಮನೆಗಳು ಇದ್ದ ಜಾಗಕ್ಕೆ ವಿಮಾನ ಬಿದ್ದಿರುವುದರಿಂದ ಸ್ಥಳೀಯ ಹಲವರು ಗಾಯಗೊಂಡಿದ್ದಾರೆ.
ಸುಡಾನ್ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಕನಿಷ್ಠ 46 ಎಂದು ತಿಳಿಸಿದೆ. ಘಟನೆ ವೇಳೆ, ಹತ್ತು ಮಂದಿ ನಾಗರಿಕರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ತೊಂದರೆಯಿಂದ ವಿಮಾನ ಪತನಗೊಂಡಿದೆ ಎಂದು ಸೇನೆ ಹೇಳಿಕೊಂಡಿದೆ.
ಹೆಚ್ಚುತ್ತಿರುವ ಅಂತರ್ಯುದ್ಧ
ಸುಡಾನ್ 2023ರಿಂದ ನಿರಂತರವಾಗಿ ಅಂತರ್ಯುದ್ಧ ನಡೆಯುತ್ತಿದ್ದು ದೇಶದ ಮಿಲಿಟರಿ ಮತ್ತು ಕುಖ್ಯಾತ ಅರೆಸೈನಿಕ ಗುಂಪು, ರಾಪಿಡ್ ಸಪೋರ್ಟ್ ಫೋರ್ಸಸ್ (ಆರ್ಎಸ್ಎಫ್) ನಡುವಿನ ಉದ್ವಿಗ್ನ ಸ್ಥಿತಿ ಯುದ್ಧ ರೂಪ ಪಡೆದಿದೆ. ಜನಾಂಗೀಯ ಹಿಂಸಾಚಾರ ಮತ್ತು ಸಾಮೂಹಿಕ ಅತ್ಯಾಚಾರದಂತಹ ಭಯಾನಕ ಘಟನೆಗಳಿಗೆ ಕಾರಣವಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳು ಈ ಘಟನೆಗಳನ್ನು ಮಾನವೀಯತೆಯ ವಿರುದ್ಧದ ಕ್ರೌರ್ಯಗಳು ಎಂದು ಕರೆದಿವೆ. ಇತ್ತೀಚಿಗೆ ಖಾರ್ಟೌಮ್ ಮತ್ತು ಇತರ ಪ್ರದೇಶಗಳಲ್ಲಿ ಆರ್ಎಸ್ಎಫ್ ಬಂಡುಕೋರರ ವಿರುದ್ಧ ಸೇನಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದಕ್ಕೆ ಪ್ರತೀಕಾರ ಎನ್ನುವಂತೆ ಸುಡಾನ್ ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಹೇಳಳಲಾಗುತ್ತಿದೆ.
Forty-six people were killed when a Sudanese military transport plane crashed into a residential neighbourhood on the outskirts of Khartoum, the regional government said Wednesday.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am