ಬ್ರೇಕಿಂಗ್ ನ್ಯೂಸ್
01-03-25 01:20 pm HK News Desk ದೇಶ - ವಿದೇಶ
ರೋಮ್, ಮಾ 01: ಎರಡು ವಾರಗಳಿಂದ ನ್ಯುಮೋನಿಯಾದಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಶುಕ್ರವಾರ ಆಗಾಗ್ಗೆ ಕೆಮ್ಮುವಿನಿಂದ ವಾಂತಿಯಾಗಿದೆ. ಉಸಿರಾಟದ ತೊಂದರೆಯಿಂದ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯಾಟಿಕನ್ ಹೇಳಿದೆ.
88 ವರ್ಷದ ಪೋಪ್ ಅವರು ಜಾಗೃತರಾಗಿದ್ದು, ಎಲ್ಲಾ ವೇಳೆಯಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಉತ್ತಮ ಮಟ್ಟದ ಆಮ್ಲಜನಕ ವಿನಿಮಯದೊಂದಿಗೆ ಪ್ರತಿಕ್ರಿಯಿಸುತ್ತಿದ್ದಾರೆ. ಹೆಚ್ಚುವರಿ ಆಮ್ಲಜನಕ ಪಡೆಯಲು ಮಾಸ್ಕ್ ಧರಿಸುವುದನ್ನು ಮುಂದುವರೆಸಿದ್ದಾರೆ ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನದ ಆರಂಭದಲ್ಲಿ ಸಂಭವಿಸಿದ ಉಸಿರಾಟದ ತೊಂದರೆಯಿಂದ ಆರೋಗ್ಯದಲ್ಲಿ ಮತ್ತಷ್ಟು ಹದಗೆಟ್ಟಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆಯೇ ಎಂಬುದರ ಬಗ್ಗೆ ಮುಂದಿನ 24 ರಿಂದ 48 ಗಂಟೆ ಅವಧಿ ವೈದ್ಯರು ತೀವ್ರ ನಿಗಾ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ. 14 ರಿಂದ ರೋಮ್ನ ಜೆಮೆಲ್ಲಿ ಆಸ್ಪತ್ರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋಪ್ ಅವರು ಯುವಕನಾಗಿದ್ದಾಗ ಶ್ವಾಸಕೋಶದ ಕಾಯಿಲೆಯಿಂದಾಗಿ ಒಂದು ಶ್ವಾಸಕೋಶದ ಭಾಗವನ್ನು ತೆಗೆದುಹಾಕಲಾಗಿದೆ. ಬ್ರಾಂಕೈಟಿಸ್ ಉಲ್ಬಣಗೊಂಡು ಎರಡೂ ಶ್ವಾಸಕೋಶಗಳಲ್ಲಿ ನ್ಯುಮೋನಿಯಾ ಉಂಟಾಗಿದೆ.
ಎರಡು ವಾರಗಳಿಗೂ ಹೆಚ್ಚು ಕಾಲದಿಂದ ಆಸ್ಪತ್ರೆಯಲ್ಲಿರುವ ಪೋಪ್ ಅವರು ಈಗ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಮಟ್ಟದ ಕೃತಕ ಉಸಿರಾಟದ ಅವಶ್ಯಕತೆಯಿದೆ ಎಂದು ಭಾವಿಸುತ್ತೇನೆ ಎಂದು ಚಿಕಾಗೋದ ನಾರ್ತ್ವೆಸ್ಟರ್ನ್ ಮೆಡಿಸಿನ್ನ ಶ್ವಾಸಕೋಶದ ಕ್ರಿಟಿಕಲ್ ಕೇರ್ ವೈದ್ಯ ಡಾ. ಜಾನ್ ಕೋಲ್ಮನ್ ಅವರು ಅಸೋಸಿಯೇಟೆಡ್ ಪ್ರೆಸ್ಗೆ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ವ್ಯಾಟಿಕನ್ ಆಡಳಿತದ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿ, ನೂತನ ಸಂತರ ನಿಯೋಜನೆ ಕುರಿತು ಚರ್ಚಿಸಿದರು.
ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿ ಇರುವಾಗಲೇ ಈ ಭೇಟಿ ಹಾಗೂ ಚರ್ಚೆ ನಡೆದಿದೆ.
ಈ ಮಧ್ಯೆ, ವ್ಯಾಟಿಕನ್ ಮಧ್ಯಾಹ್ನ ಬಿಡುಗಡೆ ಮಾಡಿದ ವಾರ್ತಾಪತ್ರದ ಪ್ರಕಾರ ಇಬ್ಬರಿಗೆ ಸಂತ ಸ್ಥಾನ ಹಾಗೂ ಇತರ ಐವರಿಗೆ ದೀಕ್ಷೆ ನೀಡುವ ಪ್ರಸ್ತಾವಕ್ಕೆ ಪೋಪ್ ಒಪ್ಪಿಗೆ ಸೂಚಿಸಿದ್ದಾರಂತೆ.
Pope Francis has suffered an “isolated breathing crisis” which caused him to vomit, provoking a “sudden worsening” of his respiratory condition, the Vatican said.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm