ಬ್ರೇಕಿಂಗ್ ನ್ಯೂಸ್
01-03-25 01:20 pm HK News Desk ದೇಶ - ವಿದೇಶ
ರೋಮ್, ಮಾ 01: ಎರಡು ವಾರಗಳಿಂದ ನ್ಯುಮೋನಿಯಾದಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಶುಕ್ರವಾರ ಆಗಾಗ್ಗೆ ಕೆಮ್ಮುವಿನಿಂದ ವಾಂತಿಯಾಗಿದೆ. ಉಸಿರಾಟದ ತೊಂದರೆಯಿಂದ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯಾಟಿಕನ್ ಹೇಳಿದೆ.
88 ವರ್ಷದ ಪೋಪ್ ಅವರು ಜಾಗೃತರಾಗಿದ್ದು, ಎಲ್ಲಾ ವೇಳೆಯಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಉತ್ತಮ ಮಟ್ಟದ ಆಮ್ಲಜನಕ ವಿನಿಮಯದೊಂದಿಗೆ ಪ್ರತಿಕ್ರಿಯಿಸುತ್ತಿದ್ದಾರೆ. ಹೆಚ್ಚುವರಿ ಆಮ್ಲಜನಕ ಪಡೆಯಲು ಮಾಸ್ಕ್ ಧರಿಸುವುದನ್ನು ಮುಂದುವರೆಸಿದ್ದಾರೆ ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನದ ಆರಂಭದಲ್ಲಿ ಸಂಭವಿಸಿದ ಉಸಿರಾಟದ ತೊಂದರೆಯಿಂದ ಆರೋಗ್ಯದಲ್ಲಿ ಮತ್ತಷ್ಟು ಹದಗೆಟ್ಟಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆಯೇ ಎಂಬುದರ ಬಗ್ಗೆ ಮುಂದಿನ 24 ರಿಂದ 48 ಗಂಟೆ ಅವಧಿ ವೈದ್ಯರು ತೀವ್ರ ನಿಗಾ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ. 14 ರಿಂದ ರೋಮ್ನ ಜೆಮೆಲ್ಲಿ ಆಸ್ಪತ್ರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋಪ್ ಅವರು ಯುವಕನಾಗಿದ್ದಾಗ ಶ್ವಾಸಕೋಶದ ಕಾಯಿಲೆಯಿಂದಾಗಿ ಒಂದು ಶ್ವಾಸಕೋಶದ ಭಾಗವನ್ನು ತೆಗೆದುಹಾಕಲಾಗಿದೆ. ಬ್ರಾಂಕೈಟಿಸ್ ಉಲ್ಬಣಗೊಂಡು ಎರಡೂ ಶ್ವಾಸಕೋಶಗಳಲ್ಲಿ ನ್ಯುಮೋನಿಯಾ ಉಂಟಾಗಿದೆ.
ಎರಡು ವಾರಗಳಿಗೂ ಹೆಚ್ಚು ಕಾಲದಿಂದ ಆಸ್ಪತ್ರೆಯಲ್ಲಿರುವ ಪೋಪ್ ಅವರು ಈಗ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಮಟ್ಟದ ಕೃತಕ ಉಸಿರಾಟದ ಅವಶ್ಯಕತೆಯಿದೆ ಎಂದು ಭಾವಿಸುತ್ತೇನೆ ಎಂದು ಚಿಕಾಗೋದ ನಾರ್ತ್ವೆಸ್ಟರ್ನ್ ಮೆಡಿಸಿನ್ನ ಶ್ವಾಸಕೋಶದ ಕ್ರಿಟಿಕಲ್ ಕೇರ್ ವೈದ್ಯ ಡಾ. ಜಾನ್ ಕೋಲ್ಮನ್ ಅವರು ಅಸೋಸಿಯೇಟೆಡ್ ಪ್ರೆಸ್ಗೆ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ವ್ಯಾಟಿಕನ್ ಆಡಳಿತದ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿ, ನೂತನ ಸಂತರ ನಿಯೋಜನೆ ಕುರಿತು ಚರ್ಚಿಸಿದರು.
ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿ ಇರುವಾಗಲೇ ಈ ಭೇಟಿ ಹಾಗೂ ಚರ್ಚೆ ನಡೆದಿದೆ.
ಈ ಮಧ್ಯೆ, ವ್ಯಾಟಿಕನ್ ಮಧ್ಯಾಹ್ನ ಬಿಡುಗಡೆ ಮಾಡಿದ ವಾರ್ತಾಪತ್ರದ ಪ್ರಕಾರ ಇಬ್ಬರಿಗೆ ಸಂತ ಸ್ಥಾನ ಹಾಗೂ ಇತರ ಐವರಿಗೆ ದೀಕ್ಷೆ ನೀಡುವ ಪ್ರಸ್ತಾವಕ್ಕೆ ಪೋಪ್ ಒಪ್ಪಿಗೆ ಸೂಚಿಸಿದ್ದಾರಂತೆ.
Pope Francis has suffered an “isolated breathing crisis” which caused him to vomit, provoking a “sudden worsening” of his respiratory condition, the Vatican said.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm