ಬ್ರೇಕಿಂಗ್ ನ್ಯೂಸ್
 
            
                        17-12-20 04:36 pm Headline Karnataka News Network ದೇಶ - ವಿದೇಶ
 
            ವಾರಣಾಸಿ, ಡಿ.17: ಮದುವೆ ಫಿಕ್ಸ್ ಆದಬಳಿಕ ಹುಡುಗ ಕೈಕೊಡುವುದನ್ನು ಕೇಳಿದ್ದೇವೆ. ಮದುವೆ ನಿರಾಕರಿಸಿ, ಹುಡುಗಿ ಬೇರೆ ಹುಡುಗನ ಜೊತೆ ಓಡಿ ಹೋಗಿದ್ದನ್ನೂ ಕೇಳಿದ್ದೇವೆ. ಆದರೆ, ಇಲ್ಲಿ ಮಾತ್ರ ಬೇರೆಯದ್ದೇ ಕತೆ ಆಗಿದೆ. ಹುಡುಗನ ಕಡೆಯವರು ಸಂಜೆ ಹೊತ್ತಿಗೆ ಹುಡುಗಿ ಮನೆಗೆಂದು ದಿಬ್ಬಣ ತೆರಳಿದ್ದಾರೆ. ಆದರೆ, ಹುಡುಗಿ ಮನೆಯನ್ನು ಪತ್ತೆ ಮಾಡಲಾಗದೆ ಇಡೀ ರಾತ್ರಿ ಬಸವಳಿದಿದ್ದಾರೆ.
ಹೌದು.. ಹುಡುಗನ ಮನೆಯವರು, ಸಂಬಂಧಿಕರೆಲ್ಲ ಸೇರಿ ಹುಡುಕಿದ್ರೂ ಹುಡುಗಿಯ ಮನೆ ಪತ್ತೆ ಮಾಡಲಾಗದೆ ಹೈರಾಣಾದ ಪ್ರಸಂಗ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಾವೋ ಜಿಲ್ಲೆಯ ರಾಣಿಪುರ ಎಂಬಲ್ಲಿ ಘಟನೆ ನಡೆದಿದ್ದು, ಇಡೀ ರಾತ್ರಿ ಊರಲ್ಲಿ ಅಲೆದಾಡಿದ ಮಂದಿ ಬೆಳಗ್ಗಿನ ಹೊತ್ತಿಗೆ ತಮ್ಮೂರಿಗೆ ಮರಳಿದ್ದಾರೆ.
ವಿಷ್ಯ ಆಗಿದ್ದು ಏನಪ್ಪಾಂದ್ರೆ, ಹುಡುಗನ ಕಡೆಯವರಿಗೆ ಸಂಬಂಧ ಮಾಡಿದ್ದು ಒಬ್ಬ ಮಧ್ಯವರ್ತಿ ಮಹಿಳೆ. ಹುಡುಗನಿಗೆ ಈ ಹಿಂದೆ ಮದುವೆಯಾಗಿದ್ದು, ಪತ್ನಿಯನ್ನು ಬಿಟ್ಟಿದ್ದ. ಆತನ ಪತ್ನಿ ಒಬ್ಬಂಟಿಯಾಗಿ ಬಿಹಾರದ ಸಮಸ್ತಿಪುರದ ತನ್ನ ಮನೆಯಲ್ಲಿ ವಾಸ ಇದ್ದಾಳೆ. ಈ ನಡುವೆ, ಬೇರೆ ಮದುವೆಯಾಗಲು ಹುಡುಗ ಮತ್ತು ಆತನ ತಾಯಿ ರೆಡಿ ಮಾಡಿಕೊಂಡಿದ್ದಾರೆ. ಹೊಸ ಸಂಬಂಧದ ಬಗ್ಗೆ ಹೇಳಿಕೊಂಡು ಬಂದಿದ್ದ ಮಹಿಳೆಯೊಬ್ಬಳು ಹೊಟೇಲ್ ಒಂದರಲ್ಲಿ ಹುಡುಗ ಮತ್ತು ಆತನ ತಾಯಿ ಜೊತೆ ಮಾತುಕತೆ ನಡೆಸಿದ್ದಾಳೆ. ಆದರೆ, ಹುಡುಗನ ಕಡೆಯವರು ಹುಡುಗಿ ಮನೆಗೆ ಹೋಗಲಿಲ್ಲ. ನೀವು ದಿಬ್ಬಣ ತಗೊಂಡು ಬನ್ನಿ. ಅಲ್ಲಿ ಅರೇಂಜ್ ಮಾಡಿಸ್ತೀನಿ ಎಂದು 20 ಸಾವಿರ ಹಣವನ್ನೂ ಮಹಿಳೆ ಪಡೆದಿದ್ದಳು. ಹುಡುಗಿ ಮನೆಯವರಿಗೆ ಹಣ ಕೊಟ್ಟು ಅಲ್ಲಿ ವ್ಯವಸ್ಥೆ ಮಾಡಬೇಕು ಎಂದಿದ್ದಳು.

ಡಿ.10ರಂದು ಮದುವೆಗೆ ದಿನ ನಿಶ್ಚಯ ಆಗಿದ್ದು, ಹುಡುಗನ ಕಡೆಯವರು ಮುನ್ನಾದಿನ ಸಂಜೆಯೇ ಹೊರಟಿದ್ದಾರೆ. ಅಜಾಮ್ ಘರ್ ಜಿಲ್ಲೆಯ ಕೊತ್ವಾಲಿ ನಗರದ ಕಾನ್ಶೀರಾಮ್ ಕಾಲನಿಯಿಂದ ಹೊರಟಿದ್ದು ಸರಿಯಾದ ಸಮಯಕ್ಕೇ ತಲುಪಿದ್ದರು. ಆದರೆ, ಹುಡುಗಿ ಮನೆಯನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಸಂಬಂಧ ಕುದುರಿಸಿದ್ದ ಮಹಿಳೆಯೂ ನಾಪತ್ತೆಯಾಗಿದ್ದಳು. ರಾತ್ರಿಯಿಡೀ ರಾಣಿಪುರ ಗ್ರಾಮದಲ್ಲಿ ಹುಡುಕಾಡಿ, ಮರುದಿನ ಬೆಳಗ್ಗೆ ಹುಡುಗನ ಸಂಬಂಧಿಕರು ಪೆಚ್ಚು ಮೋರೆ ಹಾಕ್ಕೊಂಡು ಮರಳಿದ್ದಾರೆ.
ಮನೆಗೆ ಆಗಮಿಸಿ, ಸಂಬಂಧ ಕುದುರಿಸಿದ್ದ ಮಹಿಳೆಯ ವಿರುದ್ಧ ಕೊತ್ವಾಲಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶ ಮಾಡಿದ್ದು, ಮಹಿಳೆ ಮತ್ತು ಹುಡುಗನ ಕಡೆಯವರನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.
 
            
            
            A wedding procession of a bridegroom that reached Ranipur in Mau district from Kanshi Ram Colony in Kotwali town of Uttar Pradesh's Azamgarh district, could not find the address of the bride
 
    
            
             31-10-25 06:02 pm
                        
            
                  
                Bangalore Correspondent    
            
                    
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm