ಬ್ರೇಕಿಂಗ್ ನ್ಯೂಸ್
10-03-25 11:45 am HK News Desk ದೇಶ - ವಿದೇಶ
ಕಾಸರಗೋಡು, ಮಾ.10 : 26 ದಿನಗಳ ಹಿಂದೆ ನಾಪತ್ತೆಯಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮತ್ತು 42 ವರ್ಷದ ಆಟೋ ಚಾಲಕನ ಮೃತದೇಹಗಳು ಅಕ್ಕ ಪಕ್ಕದಲ್ಲಿ ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ಕುಂಬಳೆ ಠಾಣೆ ವ್ಯಾಪ್ತಿಯ ಕುಡಾಲುಮೇರ್ಕಳ ಗ್ರಾಮದ ಮಂಡೆಕಾಪು ಎಂಬಲ್ಲಿ ಕಾಡಿನ ಮಧ್ಯೆ ಪತ್ತೆಯಾಗಿದೆ.
ಮಂಡೆಕಾಪು ನಿವಾಸಿ ರಿಕ್ಷಾ ಚಾಲಕ ಪ್ರದೀಪ್ (42) ಮತ್ತು ಆತನ ಮನೆಪಕ್ಕದ 15ರ ಹರೆಯದ ಹೈಸ್ಕೂಲು ವಿದ್ಯಾರ್ಥಿನಿ ಶ್ರೇಯಾ ಫೆ.12ರಂದು ಮನೆಯಿಂದ ಕಾಣೆಯಾಗಿದ್ದರು. ಮನೆಯಲ್ಲಿ ಮಲಗಿದ್ದ ಬಾಲಕಿ ನಸುಕಿನಲ್ಲಿ ಹಿಂಬಾಗಿಲಿನ ಮೂಲಕ ತೆರಳಿದ್ದಳು ಎಂದು ಬಾಲಕಿ ಮನೆಯವರು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ವಿವಿಧೆಡೆ ಹುಡುಕಾಡಿದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಆನಂತರ ಹೆಬಿಯಸ್ ಕಾರ್ಪಸ್ ಅರ್ಜಿಯೂ ಹೈಕೋರ್ಟಿಗೆ ಸಲ್ಲಿಕೆಯಾಗಿತ್ತು.
ಅದೇ ವೇಳೆಗೆ, ಯುವಕ ಪ್ರದೀಪ್ ಕೂಡ ನಾಪತ್ತೆಯಾಗಿದ್ದರಿಂದ ಇವರು ಎಲ್ಲಿಗೋ ಹೋಗಿದ್ದಾರೆ ಎನ್ನುವ ವದಂತಿ ಹರಡಿತ್ತು. ಇವರಿಬ್ಬರ ಮೊಬೈಲ್ಗಳು ಕೂಡ ಸ್ವಿಚ್ ಆಫ್ ಆಗಿದ್ದವು. ಮತ್ತೆ ಸಕ್ರಿಯರಾದ ಪೊಲೀಸರು ವಿಶೇಷ ತಂಡ ರಚಿಸಿ ಡ್ರೋನ್ ಬಳಸಿ ಸ್ಥಳೀಯರ ಸಹಕಾರದೊಂದಿಗೆ ಹುಡುಕಾಡುತ್ತಿದ್ದಾಗ ಇಬ್ಬರೂ ಒಂದೇ ಮರದಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಎರಡೂ ಶವಗಳೂ ತೀರಾ ಕೊಳೆತಿದ್ದು ಧರಿಸಿದ್ದ ಬಟ್ಟೆಯಿಂದ ಗುರುತು ಹಿಡಿಯಲಾಗಿದೆ.
ಪ್ರದೀಪ್ ಆಗಾಗ ಬಾಲಕಿಯ ಮನೆಗೆ ತೆರಳುತ್ತಿರುವುದಲ್ಲದೆ ಕೆಲವು ಬಾರಿ ಆಕೆಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದನಂತೆ. ಬಾಲಕಿ ಮನೆಯವರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿದ್ದ. ಪರಸ್ಪರ ಸಲುಗೆಯಿಂದಿದ್ದ ಇಬ್ಬರೂ ಮುಂದೆ ವಿವಾಹ ಆಲೋಚನೆಯಲ್ಲಿದ್ದು, ಇದಕ್ಕೆ ಬಾಲಕಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಇವರು ನಾಪತ್ತೆಯಾಗಿದ್ದರು. ಆಬಳಿಕ ಪ್ರದೀಪ್ ಸಂಬಂಧಿಕರು ಇರುವ ಮಡಿಕೇರಿಗೂ ತೆರಳಿ ಪೊಲೀಸರು ಹುಡುಕಾಟ ನಡೆಸಿದ್ದರು.
ಮೊಬೈಲ್ ಕೊನೆಯ ಬಾರಿಗೆ ರೇಂಜ್ ಲೊಕೇಶನ್ ಮಂಡೆಕಾಪು ಪರಿಸರದಲ್ಲಿಯೇ ತೋರಿಸಿದ್ದರಿಂದ ಪೊಲೀಸರು ಮತ್ತೆ ಅಲ್ಲಿಯೇ ಹುಡುಕಾಟಕ್ಕಿಳಿದಿದ್ದರು. ಶವ ಪತ್ತೆಯಾದ ಸ್ಥಳದಲ್ಲಿ ಎರಡು ಮೊಬೈಲ್ ಫೋನ್ಗಳು ಮತ್ತು ಒಂದು ಕತ್ತಿ ಪತ್ತೆಯಾಗಿದೆ. ನಾಪತ್ತೆಯಾದ ಘಟನೆ ಬಳಿಕ ಅದೇ ಜಾಗಕ್ಕೆ ಬಂದು ಯುವಕ- ಯುವತಿ ತಮ್ಮ ಪ್ರೀತಿಗೆ ಒಪ್ಪಿಗೆ ಇಲ್ಲ ಎಂಬ ಕೊರಗಿನಲ್ಲಿ ಕಾಡಿನ ಮಧ್ಯೆ ಮರಕ್ಕೆ ನೇಣು ಬಿಗಿದು ಕೊಂಡಿರುವಂತೆ ಕಾಣುತ್ತಿದೆ.
The search for a 15-year-old schoolgirl and a 42-year-old driver, missing for 25 days, ended in ended in tragedy as their bodies were found inside the Merkala forest in Kasaragod's Paivalike grama panchayat on Sunday.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm