ಬ್ರೇಕಿಂಗ್ ನ್ಯೂಸ್
27-03-25 04:07 pm HK News Desk ದೇಶ - ವಿದೇಶ
ನವದೆಹಲಿ, ಮಾ.27 : ಶೀಘ್ರದಲ್ಲಿಯೇ ದೇಶದಲ್ಲಿ ಸಹಕಾರಿ ವ್ಯವಸ್ಥೆಯಡಿ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದಾರೆ. ಓಲಾ, ಊಬರ್ ರೀತಿಯಲ್ಲೇ ಈ ಸೇವೆ ಕೆಲಸ ಮಾಡಲಿದ್ದು ಇದರ ಬೆನಿಫಿಟ್ ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆಯನ್ನು ಸ್ಥಾಪಿಸಲಾಗುವುದು ಎಂದು ಅಮಿತ್ ಷಾ ತಿಳಿಸಿದ್ದಾರೆ. ಓಲಾ ಮತ್ತು ಉಬರ್ ನಂತಹ ಪ್ಲಾಟ್ಫಾರ್ಮ್ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉದ್ಯೋಗ ಭದ್ರತೆ, ನ್ಯಾಯಯುತ ವೇತನ ಮತ್ತು ರಚನಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಈ ಉಪಕ್ರಮ ಹೊಂದಿದೆ.
ಸಹಕಾರದಿಂದ ಸಮೃದ್ದಿ ಎಂದು ಪ್ರಧಾನಿ ಹೇಳಿರುವುದು ಬರೀ ಘೋಷಣೆಯಲ್ಲ. ಮುಂದಿನ ದಿನಗಳಲ್ಲಿ ಓಲಾ, ಉಬರ್ ರೀತಿಯಲ್ಲಿ ಸಹಕಾರಿ ಟ್ಯಾಕ್ಸಿ ಸೇವೆಯೂ ಆರಂಭವಾಗಲಿದೆ. ಇದರಲ್ಲಿ ದ್ವಿಚಕ್ರ ವಾಹನವನ್ನೂ ಅದರಲ್ಲಿ ಟ್ಯಾಕ್ಸಿಯಾಗಿ ರಿಜಿಷ್ಟ್ರೇಷನ್ ಮಾಡಿಕೊಳ್ಳಬಹುದು. ರಿಕ್ಷಾ, ಕಾರಿನಂತಹ ವಾಹನಗಳನ್ನು ಅದರಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇದರ ಯಾವುದೇ ಲಾಭಗಳು ಮೂರನೇ ವ್ಯಕ್ತಿಯ ಪಾಲಾಗೋದಿಲ್ಲ. ಅದು ನೇರವಾಗಿ ಚಾಲಕನಿಗೆ ಸೇರಲಿದೆ. ಅದರೊಂದಿಗೆ ಸಹಕಾರಿ ವಿಮೆ ಕೂಡ ಶೀಘ್ರದಲ್ಲಿ ಬರಲಿದೆ ಎಂದು ಸಂಸತ್ತಿನಲ್ಲಿ ಗೃಹ ಸಚಿವರು ತಿಳಿಸಿದ್ದಾರೆ.
ಸಹಕಾರಿ ಚೌಕಟ್ಟನ್ನು ಬಳಸಿಕೊಳ್ಳುವ ಮೂಲಕ, ಈ ಸಂಸ್ಥೆಯು ಭಾರತದಾದ್ಯಂತ ಚಾಲಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆ ಖಚಿತಪಡಿಸಲಿದೆ. ಸಹಕಾರಿ ವಲಯವನ್ನು ವಿವಿಧ ಅಗತ್ಯ ಸೇವೆಗಳಾಗಿ ವಿಸ್ತರಿಸುವ ಸರ್ಕಾರದ ಬದ್ಧತೆಯನ್ನು ಅಮಿತ್ ಶಾ ಒತ್ತಿ ಹೇಳಿದರು. ಇದರಲ್ಲಿ ಪೆಟ್ರೋಲ್ ಪಂಪ್ಗಳು, ಅನಿಲ ವಿತರಣೆ, ಪಡಿತರ ಅಂಗಡಿಗಳು, ಔಷಧ ಅಂಗಡಿಗಳು, ಗೋದಾಮುಗಳು, ನೀರಿನ ನಿರ್ವಹಣೆ, ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಯೂ ಸೇರಿರುತ್ತವೆ.
Union Home Minister Amit Shah announced in Parliament that the government is set to introduce 'Sahkar Taxi', a cooperative-based ride-hailing service designed to benefit drivers directly. The initiative, modelled after app-based services like Ola and Uber, will allow cooperative societies to register two-wheelers, taxis, rickshaws, and four-wheelers without intermediaries taking a cut from drivers' earnings.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm