ಬ್ರೇಕಿಂಗ್ ನ್ಯೂಸ್
28-03-25 01:38 pm HK News Desk ದೇಶ - ವಿದೇಶ
ಹರಿಯಾಣ, ಮಾ 28: ಡಿಜಿಟಲ್ ವಂಚನೆ, ಡಿಜಿಟಲ್ ಅರೆಸ್ಟ್ನಂತಹ ಪ್ರಕರಣಗಳು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿವೆ. ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಅವರನ್ನ ಮರಳು ಮಾಡುವದರಲ್ಲಿ ವಂಚಕರು ಯಶಸ್ವಿಯಾಗುತ್ತಲೇ ಇದ್ದಾರೆ. ಇಷ್ಟು ದಿನ ನಾವು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು, ಸಿಬಿಐ ಅಧಿಕಾರಿಗಳಿ, ಇಡಿ ಅಧಿಕಾರಿಗಳು ಎಂದು ಹೇಳಿ ವ್ಯಕ್ತಿಗಳನ್ನು ಡಿಜಿಟಲ್ ಅರೆಸ್ಟ್ ಮಾಡಿ ಹಣ ವಂಚಿಸುತ್ತಿದ್ದರು. ಆದರೆ, ಹರಿಯಾಣದ ಫರೀದಾಬಾದ್ನಲ್ಲಿ ನಿವೃತ್ತ ಪೈಲಟ್ರೊಬ್ಬರನ್ನ ವಿಶ್ವದ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ಹೆಸರು ಹೇಳಿ ವಂಚಿಸಿದ್ದಾರೆ.
ನಿವೃತ್ತ ಪೈಲೆಟ್ ಶಕ್ತಿ ಸಿಂಗ್ ಲಂಬಾ ಜೊತೆ ಸೋಷಿಯಲ್ ಮೀಡಿಯಾದಲ್ಲಿ ಚಾಟಿಂಗ್ ಮಾಡಿದ ವ್ಯಕ್ತಿಯೊಬ್ಬ ನಾನು ಎಲಾನ್ ಮಸ್ಕ್ ಕಂಪನಿಯ ಮ್ಯಾನೇಜರ್ ಎಂದು ಚಾಟಿಂಗ್ ಮಾಡಿದ್ದಾನೆ. ಅವರು ಭಾರತಕ್ಕೆ ಬಂದಾಗ ನಿಮಗೆ ಅವರನ್ನು ಭೇಟಿ ಮಾಡಿಸುತ್ತೇನೆ, ನೀವು ಅವರ ಕಂಪನಿಯಲ್ಲಿ ಹೂಡಿಕೆ ಮಾಡಿ ಎಂದು ದುಂಬಾಲು ಬಿದ್ದಿದ್ದಾನೆ. ಇದನ್ನು ನಂಬಿದ ಶಕ್ತಿಸಿಂಗ್ ಲಂಬಾ ಅವರು ಪ್ರಾರಂಭದಲ್ಲಿ ಎರಡು ಲಕ್ಷ ರೂಪಾಯಿ ನೀಡಿದ್ದಾರೆ.
ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಎಲಾನ್ ಮಸ್ಕ್ ತಾಯಿ ಹೆಸರನಲ್ಲಿ ಶಕ್ತಿಸಿಂಗ್ ಜೊತೆ ಚಾಟಿಂಗ್ ನಡೆದಿದೆ. ನಿಮಗೆ ಉಡುಗೊರೆಯಾಗಿ ರೋಲೆಕ್ಸ್ ವಾಚ್ ಕಳುಹಿಸುತ್ತಿದ್ದೇವೆ ಎಂದು ವಾಚ್ ಫೋಟೋ ತೋರಿಸಿ ಚಾಟಿಂಗ್ ಮಾಡಿದ್ದಾರೆ. ಶಕ್ತಿಸಿಂಗ್ ಲಂಬಾ ತಾನು ಮಸ್ಕ್ ತಾಯಿಯ ಜೊತೆಯೇ ಚಾಟ್ ಮಾಡುತ್ತಿದ್ದೇನೆ ಎಂದು ನಂಬಿದ್ದಾರೆ.
ಹೀಗೆ ಹಲವು ಜಾಲಗಳನ್ನು ಬೀಸಿ ಶಕ್ತಸಿಂಗ್ರಿಂದ ಒಟ್ಟು 72 ಲಕ್ಷ ರೂಪಾಯಿಯನ್ನು ಹೂಡಿಕೆ ನೆಪದಲ್ಲಿ ದೋಚಲಾಗಿದೆ. ಶಕ್ತಿಸಿಂಗ್ ಅವರ ವಿವಿಧ ಖಾತೆಗಳಿಂದ ಒಟ್ಟು 72 ಲಕ್ಷ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡು ಟೋಪಿ ಹಾಕಲಾಗಿದೆ. ಕೊನೆಗೆ ನಾನು ವಂಚಕರ ಬಲೆಗೆ ಬಿದ್ದಿದ್ದೇನೆ ಎಂದು ಅರಿತ ನಿವೃತ್ತ ಪೈಲೆಟ್ ಶಕ್ತಿಸಿಂಗ್ ಲಂಬಾ, ಸದ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
A retired pilot in Faridabad was duped of Rs 72 lakh by fraudsters who lured him with the promise of an opportunity to meet the world's richest man, Elon Musk. Shakti Singh Lumba said he was contacted via his social media account by a person claiming to be a manager at Elon Musk's company.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm