ಬ್ರೇಕಿಂಗ್ ನ್ಯೂಸ್
29-03-25 04:40 pm HK News Desk ದೇಶ - ವಿದೇಶ
ನವದೆಹಲಿ, ಮಾ.29 : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಅಧೀನದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಧಾರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಏಪ್ರಿಲ್ 14, 2025 ರಂದು ಎಲ್ಲಾ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರವ್ಯಾಪಿ ರಜಾದಿನವೆಂದು ಘೋಷಿಸುವ ನಿರ್ಧಾರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಕೊಡುಗೆಗಳಿಗೆ ಅರ್ಹವಾದ ಗೌರವವಾಗಿದೆ. ಈ ಚಿಂತನಶೀಲ ನಿರ್ಧಾರವನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ. ಡಾ. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಸಬಲೀಕರಣದ ದೃಷ್ಟಿಕೋನವು ನಮ್ಮ ರಾಷ್ಟ್ರವನ್ನು ರೂಪಿಸುತ್ತಲೇ ಇದೆ. ನಮ್ಮ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಈ ಅರ್ಥಪೂರ್ಣ ಕಾರ್ಯಕ್ಕಾಗಿ ಗೌರವಾನ್ವಿತ ಪ್ರಧಾನಿ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದೇಶದ ಪ್ರಜಾಪ್ರಭುತ್ವವನ್ನು ಹುಟ್ಟುಹಾಕಿದ ಮಹಾತ್ಮ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಂಕ ಏಪ್ರಿಲ್ 14 ರಂದು ಸಾರ್ವತ್ರಿಕ ರಜೆಯನ್ನು ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಆಶಯ ಹಾಗೂ ಸಮ ಸಮಾಜದ ಕನಸನ್ನು ನನಸಾಗಿಸಲು, ಭಾರತೀಯ ಜನತಾ ಪಕ್ಷ ಎಂದೆಂದಿಗೂ ಬದ್ಧವಾಗಿದೆ ಎನ್ನಲು ಹೆಮ್ಮೆಯಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟ್ವೀಟ್ ಮಾಡಿದ್ದಾರೆ.
ಅಂಬೇಡ್ಕರ್ ಜಯಂತಿ ಅವರ ಸ್ಮರಣೆ ಹಾಗೂ ಆಚರಣೆಗಾಗಿ ಮಾತ್ರ ಸೀಮಿತಗೊಳ್ಳದೆ ಆ ದಿನದಂದು ಅವರ ಮಹಾನ್ ಪರಿಶ್ರಮದಿಂದ ರೂಪುಗೊಂಡ ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬ ಪ್ರಜೆಯೂ ಅಂಬೇಡ್ಕರ್ ಅವರನ್ನು ಭಕ್ತಿ ಹಾಗೂ ಅಭಿಮಾನದಿಂದ ಗೌರವಿಸುವ ದಿನವಾಗಲಿ, ಭಾರತದ ಚರಿತ್ರೆಯ ಸುವರ್ಣಾಕ್ಷರಗಳಲ್ಲಿ ಏಪ್ರಿಲ್ 14 ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶ್ರೇಷ್ಠತೆಯನ್ನು ವಿಶ್ವ ಮೆಚ್ಚುವ ಹೆಮ್ಮೆಯ ದಿನವಾಗಲಿ ಎಂದು ಸಂಕಲ್ಪ ತೊಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
The Central government on Friday, March 28, declared Dr Bhimrao Ramji Ambedkar’s birth anniversary, on April 14, as a public holiday for his ‘contributions to society and the Constitution.’
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm