ಬ್ರೇಕಿಂಗ್ ನ್ಯೂಸ್
29-03-25 04:40 pm HK News Desk ದೇಶ - ವಿದೇಶ
ನವದೆಹಲಿ, ಮಾ.29 : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14ರಂದು ದೇಶಾದ್ಯಂತ ಕೇಂದ್ರ ಸರ್ಕಾರಿ ಅಧೀನದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಧಾರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಏಪ್ರಿಲ್ 14, 2025 ರಂದು ಎಲ್ಲಾ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರವ್ಯಾಪಿ ರಜಾದಿನವೆಂದು ಘೋಷಿಸುವ ನಿರ್ಧಾರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಕೊಡುಗೆಗಳಿಗೆ ಅರ್ಹವಾದ ಗೌರವವಾಗಿದೆ. ಈ ಚಿಂತನಶೀಲ ನಿರ್ಧಾರವನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ. ಡಾ. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಸಬಲೀಕರಣದ ದೃಷ್ಟಿಕೋನವು ನಮ್ಮ ರಾಷ್ಟ್ರವನ್ನು ರೂಪಿಸುತ್ತಲೇ ಇದೆ. ನಮ್ಮ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಈ ಅರ್ಥಪೂರ್ಣ ಕಾರ್ಯಕ್ಕಾಗಿ ಗೌರವಾನ್ವಿತ ಪ್ರಧಾನಿ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದೇಶದ ಪ್ರಜಾಪ್ರಭುತ್ವವನ್ನು ಹುಟ್ಟುಹಾಕಿದ ಮಹಾತ್ಮ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಂಕ ಏಪ್ರಿಲ್ 14 ರಂದು ಸಾರ್ವತ್ರಿಕ ರಜೆಯನ್ನು ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಆಶಯ ಹಾಗೂ ಸಮ ಸಮಾಜದ ಕನಸನ್ನು ನನಸಾಗಿಸಲು, ಭಾರತೀಯ ಜನತಾ ಪಕ್ಷ ಎಂದೆಂದಿಗೂ ಬದ್ಧವಾಗಿದೆ ಎನ್ನಲು ಹೆಮ್ಮೆಯಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟ್ವೀಟ್ ಮಾಡಿದ್ದಾರೆ.
ಅಂಬೇಡ್ಕರ್ ಜಯಂತಿ ಅವರ ಸ್ಮರಣೆ ಹಾಗೂ ಆಚರಣೆಗಾಗಿ ಮಾತ್ರ ಸೀಮಿತಗೊಳ್ಳದೆ ಆ ದಿನದಂದು ಅವರ ಮಹಾನ್ ಪರಿಶ್ರಮದಿಂದ ರೂಪುಗೊಂಡ ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬ ಪ್ರಜೆಯೂ ಅಂಬೇಡ್ಕರ್ ಅವರನ್ನು ಭಕ್ತಿ ಹಾಗೂ ಅಭಿಮಾನದಿಂದ ಗೌರವಿಸುವ ದಿನವಾಗಲಿ, ಭಾರತದ ಚರಿತ್ರೆಯ ಸುವರ್ಣಾಕ್ಷರಗಳಲ್ಲಿ ಏಪ್ರಿಲ್ 14 ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶ್ರೇಷ್ಠತೆಯನ್ನು ವಿಶ್ವ ಮೆಚ್ಚುವ ಹೆಮ್ಮೆಯ ದಿನವಾಗಲಿ ಎಂದು ಸಂಕಲ್ಪ ತೊಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
The Central government on Friday, March 28, declared Dr Bhimrao Ramji Ambedkar’s birth anniversary, on April 14, as a public holiday for his ‘contributions to society and the Constitution.’
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm