ಬ್ರೇಕಿಂಗ್ ನ್ಯೂಸ್
04-04-25 12:44 pm HK News Desk ದೇಶ - ವಿದೇಶ
ನವದೆಹಲಿ, ಎ.4 : ಹಗಲು - ರಾತ್ರಿಯೆನ್ನದೆ ಸುದೀರ್ಘ ಚರ್ಚೆ ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆಯೇ ಸಂಸತ್ತಿನ ಎರಡೂ ಸದನಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ರಾಜ್ಯಸಭೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಶುರುವಾದ ಚರ್ಚೆ ಮಧ್ಯರಾತ್ರಿ ಕಳೆದೂ ಮುಂದುವರಿದಿತ್ತು. ಕೊನೆಗೆ, ಮಸೂದೆಯ ಪರವಾಗಿ 128 ಮತಗಳು ಮತ್ತು ವಿರೋಧವಾಗಿ 95 ಮತಗಳು ಚಲಾವಣೆಗೊಂಡು ಕಾನೂನಿಗೆ ಸಂಸತ್ತಿನ ಮನ್ನಣೆ ಸಿಕ್ಕಿತು.
ವಕ್ಫ್ ಮಂಡಳಿಗೆ ತಿದ್ದುಪಡಿ ತರಲು ಕೋರುವ ಮಸೂದೆಯು ಮುಸಲ್ಮಾನ ಸಮುದಾಯಗಳಿಗೆ ಯಾವುದೇ ಹಾನಿ ಮಾಡುವುದಿಲ್ಲ. ಬದಲಿಗೆ ಅವರಿಗೆ ಇನ್ನಷ್ಟು ಹೆಚ್ಚಿನ ಪ್ರಯೋಜನ ಮತ್ತು ಭದ್ರತೆಯನ್ನು ನೀಡುತ್ತದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತಿಗೆ ಹೆಚ್ಚಿನ ಸಂಸದರು ತಲೆದೂಗಿದ್ದಾರೆ.
ವಕ್ಫ್ ಮಂಡಳಿ ಮುಂದೆಯೂ ಹಾಗೆಯೇ ಇರುತ್ತದೆ. ವಕ್ಫ್ ಮಂಡಳಿಯು ಶಾಸನಬದ್ಧ ಸಂಸ್ಥೆಯಾಗಿದ್ದು, ಮುಸ್ಲಿಮರನ್ನು ಮಾತ್ರ ಶಾಸನಬದ್ಧ ಸಂಸ್ಥೆಯಲ್ಲಿ ಏಕೆ ಸೇರಿಸಬೇಕು. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿವಾದವಿದ್ದರೆ, ಆ ವಿವಾದವನ್ನು ಹೇಗೆ ಪರಿಹರಿಸಲಾಗುತ್ತದೆ. ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರೊಂದಿಗೆ ಇರಬಹುದಾದ ವಿವಾದಗಳನ್ನೂ ಪರಿಹರಿಸಬೇಕಲ್ಲವೇ ಎಂದು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದರು.
ಜಾತ್ಯತೀತ ಸಂಸ್ಥೆಯಾಗಿರಬೇಕು ; ರಿಜಿಜು
ಶಾಸನಬದ್ಧ ಸಂಸ್ಥೆಯು ಎಲ್ಲಾ ಧರ್ಮಗಳ ಪ್ರತಿನಿಧಿಗಳನ್ನು ಒಳಗೊಂಡ ಜಾತ್ಯತೀತ ಸಂಸ್ಥೆಯಾಗಿರಬೇಕು ಎಂದು ರಿಜಿಜು ವಾದಿಸಿದರು. ನಂತರ ಮಸೂದೆಯನ್ನು ರಾಜ್ಯಸಭೆಯಲ್ಲಿ ಷರತ್ತು-ಅನುಬಂಧದ ಆಧಾರದ ಮೇಲೆ ಮತಕ್ಕೆ ಹಾಕಲಾಯಿತು. ರಾಜ್ಯಸಭೆಯಲ್ಲಿ ಬಿಜೆಪಿಗೆ ಸದಸ್ಯ ಬಲ ಕಡಿಮೆಯಿದ್ದರೂ, ಮಿತ್ರಪಕ್ಷಗಳ ನೆರವಿನಿಂದ ಮಸೂದೆಗೆ ಜಯ ಸಿಕ್ಕಿತು. ಎ.2ರಂದು ಲೋಕಸಭೆಯಲ್ಲಿ ಮಸೂದೆ ಪರವಾಗಿ 288 ಸದಸ್ಯರು ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರು.
ಒಂದ್ವೇಳೆ, ರಾಜ್ಯಸಭೆಯಲ್ಲಿ ಈ ಮಸೂದೆ ತಿರಸ್ಕೃತಗೊಂಡಿದ್ದರೆ, ಇದನ್ನು ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಪುನಃ ರಾಜ್ಯಸಭೆ ಅನುಮೋದನೆಗೆ ಒಯ್ಯಬೇಕಿತ್ತು. ಅದಕ್ಕೆ ಮತ್ತಷ್ಟು ದಿನಗಳು ಬೇಕಾಗುತ್ತಿದ್ದವು. ಈಗ ಇದೇ ಬಜೆಟ್ ಅಧಿವೇಶನದಲ್ಲಿ ಮಸೂದೆಗೆ ಸಂಸತ್ತಿನ ಎರಡೂ ಸದನಗಳ ಅಂಗೀಕಾರ ಸಿಕ್ಕಿರುವುದರಿಂದ ಮುಂದೆ ರಾಷ್ಟ್ರಪತಿಗಳ ಸಹಿಗೆ ಕಳುಹಿಸಲಾಗುತ್ತದೆ. ಸಹಿ ಬಿದ್ದ ಕೂಡಲೇ ಅದು ಉಮೀದ್ ಎಂಬ ಹೆಸರಿನಲ್ಲಿ ಕಾನೂನಾಗಿ ಜಾರಿಗೆ ಬರಲಿದೆ.
The Budget session of Parliament will convene on Friday (April 4, 2025) after two days of hectic debate in Lok Sabha and Rajya Sabha for the passage of Waqf (Amendment) Bill 2025.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm