ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm