ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm