ಬ್ರೇಕಿಂಗ್ ನ್ಯೂಸ್
14-04-25 05:38 pm HK News Desk ದೇಶ - ವಿದೇಶ
ನವದೆಹಲಿ, ಎ.14 : ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 1400 ಕೋಟಿ ರೂ. ವಂಚನೆ ಎಸಗಿ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. ಭಾರತದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಮನವಿ ಮೇರೆಗೆ ಬೆಲ್ಜಿಯಂ ಪೊಲೀಸರು ಚೋಕ್ಸಿ ಅವರನ್ನು ಬಂಧಿಸಿದ್ದಾರೆ.
ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಗೀತಾಂಜಲಿ ಗ್ರೂಪ್ನ ಮಾಲೀಕರಾಗಿದ್ದು 2011ರಿಂದ ಸಾಲದ ಹೆಸರಿನಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್ ನಿಂದ ನಿರಂತರ ಸಾಲ ಪಡೆದು ವಂಚನೆ ಎಸಗಿದ್ದರು. 2018ರಲ್ಲಿ 13 ಸಾವಿರ ಕೋಟಿ ಸಾಲದ ವಿಚಾರ ಹಗರಣದ ರೂಪ ಪಡೆಯುತ್ತಿದ್ದಂತೆ ದೇಶದಿಂದ ಪಲಾಯನ ಮಾಡಿದ್ದರು. ಅವರನ್ನು ಬಂಧನ ಮಾಡಬೇಕೆಂದು ಬಹಳಷ್ಟು ಪ್ರಯತ್ನಗಳು ನಡೆದಿದ್ದವು. ಇದೀಗ ಮುಂಬೈ ನ್ಯಾಯಾಲಯವು 2018 ಮೇ 23 ಮತ್ತು 2021 ಜೂನ್ 15 ರಂದು ಹೊರಡಿಸಿದ ಎರಡು ಅರೆಸ್ಟ್ ವಾರಂಟ್ ಆಧಾರದಲ್ಲಿ ಬೆಲ್ಜಿಯಂ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದಾರೆ.
ವಿದೇಶಕ್ಕೆ ಹಾರಿದ್ದ 65 ವರ್ಷದ ಮೆಹುಲ್ ಚೋಕ್ಸಿ ಆಂಟಿಗುವಾ ಮತ್ತು ಬಾರ್ಬುಡಾ ದೇಶಕ್ಕೆ ತೆರಳಿ, ಅಲ್ಲಿನ ಪೌರತ್ವವನ್ನು ಪಡೆದಿದ್ದರು. ಭಾರತದಲ್ಲಿ ನಡೆದ ಬ್ಯಾಂಕ್ ಹಗರಣದಲ್ಲಿ ಚೋಕ್ಸಿ ಜೊತೆಗೆ ನೀರವ್ ಮೋದಿ ಕೂಡ ಆರೋಪಿಯಾಗಿದ್ದ. ಆತ ಲಂಡನ್ನಲ್ಲಿ ತಲೆಮರೆಸಿಕೊಂಡಿದ್ದಾನೆ. ಚೋಕ್ಸಿ ಬೆಲ್ಜಿಯಂ ತಲುಪುತ್ತಲೇ ಸಿಬಿಐ ಮತ್ತು ಇಡಿ ಅಧಿಕಾರಿಗಳು ಚೋಕ್ಸಿ ಗಡೀಪಾರು ಕೋರಿ 3 ತಿಂಗಳ ಹಿಂದೆ ಬೆಲ್ಜಿಯಂ ಸರಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಬೆಲ್ಜಿಯಂನಲ್ಲಿ ಕುಣಿಕೆ ಬಿಗಿಯಾಗುತ್ತಿರುವುದನ್ನು ತಿಳಿದ ಚೋಕ್ಸಿ ಇದರ ನಡುವೆ ಸ್ವಿಟ್ಜರ್ಲೆಂಡ್ಗೆ ಪಲಾಯನ ಮಾಡಲು ಯೋಜಿಸುತ್ತಿದ್ದ. ಆದರೆ ಭಾರತೀಯ ಸಂಸ್ಥೆಗಳ ಕೋರಿಕೆ ಮೇರೆಗೆ, ಬೆಲ್ಜಿಯಂ ಆಡಳಿತವು ಅವರನ್ನು ಬಂಧಿಸಿತು.
ಬೆಲ್ಜಿಯಂನಲ್ಲಿ ಬಂಧನಕ್ಕೆ ನಂತರ ಮೆಹುಲ್ ಚೋಕ್ಸಿ ಅನಾರೋಗ್ಯದ ಕಾರಣ ಅಲ್ಲಿನ ಕೋರ್ಟಿನಲ್ಲಿ ಜಾಮೀನು ಕೋರಿದ್ದಾರೆ. ಚೋಕ್ಸಿ ಚಿಕಿತ್ಸೆಗಾಗಿ ಆಂಟಿಗುವಾ ಮತ್ತು ಬಾರ್ಬುಡಾದಿಂದ ಬೆಲ್ಜಿಯಂಗೆ ಬಂದಿದ್ದರು. ಪತ್ನಿ ಪ್ರೀತಿ ಚೋಕ್ಸಿ ಜೊತೆಗೆ ವಾಸಿಸುತ್ತಿದ್ದರು ಎಂದು ಚೋಕ್ಸಿ ಪರ ವಕೀಲರು ತಿಳಿಸಿದ್ದಾರೆ.
Fugitive diamond trader Mehul Choksi, wanted in connection with the Punjab National Bank (PNB) loan fraud case, has been arrested by Belgian authorities. The arrest, made at the request of Indian agencies including the Central Bureau of Investigation (CBI) and the Enforcement Directorate (ED), follows non-bailable
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm