ಬ್ರೇಕಿಂಗ್ ನ್ಯೂಸ್
16-04-25 03:54 pm HK News Desk ದೇಶ - ವಿದೇಶ
ನವದೆಹಲಿ, ಎ.16 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ. ಸುಮನ್ ದುಬೆ ಮತ್ತು ಇತರರ ಹೆಸರುಗಳನ್ನು ಸಹ ಈ ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಪ್ರಕರಣದ ಬಗ್ಗೆ ನ್ಯಾಯಾಲಯ ಏಪ್ರಿಲ್ 25ರಂದು ವಿಚಾರಣೆ ಆರಂಭಿಸಲಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಏಪ್ರಿಲ್ 9ರಂದು ಸಲ್ಲಿಸಲಾದ ಆರೋಪ ಪಟ್ಟಿಯನ್ನು ಪರಿಶೀಲನೆ ನಡೆಸಿದ್ದು ಪ್ರಕರಣವನ್ನು ಮುಂದಿನ ವಿಚಾರಣೆಗೆ ಏಪ್ರಿಲ್ 25ಕ್ಕೆ ಮುಂದೂಡಿದ್ದಾರೆ. 661 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆಯಲು ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಹಿಂದೆ, ಕಾಂಗ್ರೆಸ್ ನಿಯಂತ್ರಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಪ್ತಿ ಮಾಡಿದ್ದ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಕ್ಕೆ ಪಡೆಯಲು ಇಡಿ ನೋಟಿಸ್ ಜಾರಿ ಮಾಡಿತ್ತು.
ಪ್ರಕರಣ ಸಂಬಂಧ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಅಥವಾ ಗಾಂಧಿ ಕುಟುಂಬ ಇಲ್ಲಿಯವರೆಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಶನಿವಾರ ಇಡಿ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಳ್ಳಲು ನೋಟಿಸ್ ನೀಡಿತ್ತು. ದೆಹಲಿ, ಮುಂಬೈನ ಬಾಂದ್ರಾ ಪ್ರದೇಶ ಮತ್ತು ಲಕ್ನೋ ನಗರದ ಬಿಶ್ವೇಶ್ವರ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದ ಆಸ್ತಿಗಳ ಮೇಲೆ ನೋಟಿಸ್ಗಳನ್ನು ಅಂಟಿಸಲಾಗಿತ್ತು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯ ಹೆಸರಲ್ಲಿ ಎಜೆಎಲ್ಗೆ ಸೇರಿದ ರೂ. 2,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮೋಸದಿಂದ ಸ್ವಾಧೀನಪಡಿಸಿಕೊಂಡಿದ್ದು ಅದರ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ ಇಡಿಗೆ ದೂರು ನೀಡಿದ್ದರು. ನ್ಯಾಷನಲ್ ಹೆರಾಲ್ಡ್ ಯಂಗ್ ಇಂಡಿಯನ್ ಒಡೆತನದ ಪತ್ರಿಕೆಯಾಗಿತ್ತು. ಸೋನಿಯಾ ಮತ್ತು ರಾಹುಲ್ ಇದರ ದೊಡ್ಡ ಷೇರುದಾರರಾಗಿದ್ದು, ತಲಾ ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.
The Enforcement Directorate has filed a chargesheet against Congress leaders Sonia Gandhi, Rahul Gandhi and others in connection with alleged money laundering in the National Herald case.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm