ಬ್ರೇಕಿಂಗ್ ನ್ಯೂಸ್
24-04-25 12:46 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಜಮ್ಮು ಕಾಶ್ಮೀರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಗಮಿಸಿದ್ದು ತುರ್ತಾಗಿ ಹಿರಿಯ ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದು, ಎರಡು ದೇಶಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಂತೆ, ಪಾಕಿಸ್ತಾನಿಯರಿಗೆ ಭಾರತ ಪ್ರವೇಶವನ್ನು ನಿಷೇಧಿಸಿದ್ದಾರೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣ ನಿಲ್ಲಿಸುವ ವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುತ್ತದೆ. ಇದಲ್ಲದೆ, ಉಭಯ ದೇಶಗಳ ನಡುವಿನ ರಸ್ತೆ ಸಂಚಾರದ ಅಟ್ಟಾರಿ- ವಾಘಾ ಚೆಕ್ ಪೋಸ್ಟ್ ಮುಚ್ಚಲಾಗುವುದು. ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶ ರದ್ದು. ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶ ಇರುತ್ತದೆ.
ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರು ಭಾರತವನ್ನು ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. ಭಾರತದ ಕಡೆಯಿಂದ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಇರಿಸಿರುವ ಭಾರತೀಯ ಹೈಕಮಿಷನ್ ಕಚೇರಿಯ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ಭಾರತ ವಾಪಾಸ್ ಕರೆಸಿಕೊಳ್ಳಲಿದೆ.
The Cabinet Committee on Security or CCS - the country's highest-decision making body on national security has taken some strict and punishing measures against Pakistan over the "cross-border linkages" that have surfaced in the investigation over the dastardly terror attack in Jammu and Kashmir's Pahalgam, in which 26 people, including one foreign national, were killed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm