ಬ್ರೇಕಿಂಗ್ ನ್ಯೂಸ್
24-04-25 12:46 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಜಮ್ಮು ಕಾಶ್ಮೀರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಗಮಿಸಿದ್ದು ತುರ್ತಾಗಿ ಹಿರಿಯ ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದು, ಎರಡು ದೇಶಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಂತೆ, ಪಾಕಿಸ್ತಾನಿಯರಿಗೆ ಭಾರತ ಪ್ರವೇಶವನ್ನು ನಿಷೇಧಿಸಿದ್ದಾರೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣ ನಿಲ್ಲಿಸುವ ವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುತ್ತದೆ. ಇದಲ್ಲದೆ, ಉಭಯ ದೇಶಗಳ ನಡುವಿನ ರಸ್ತೆ ಸಂಚಾರದ ಅಟ್ಟಾರಿ- ವಾಘಾ ಚೆಕ್ ಪೋಸ್ಟ್ ಮುಚ್ಚಲಾಗುವುದು. ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶ ರದ್ದು. ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶ ಇರುತ್ತದೆ.
ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರು ಭಾರತವನ್ನು ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. ಭಾರತದ ಕಡೆಯಿಂದ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಇರಿಸಿರುವ ಭಾರತೀಯ ಹೈಕಮಿಷನ್ ಕಚೇರಿಯ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ಭಾರತ ವಾಪಾಸ್ ಕರೆಸಿಕೊಳ್ಳಲಿದೆ.
The Cabinet Committee on Security or CCS - the country's highest-decision making body on national security has taken some strict and punishing measures against Pakistan over the "cross-border linkages" that have surfaced in the investigation over the dastardly terror attack in Jammu and Kashmir's Pahalgam, in which 26 people, including one foreign national, were killed.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm