ಬ್ರೇಕಿಂಗ್ ನ್ಯೂಸ್
29-04-25 03:45 pm HK News Desk ದೇಶ - ವಿದೇಶ
ನವದೆಹಲಿ, ಏ 29 : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕಾಂಗ್ರೆಸ್ ಹಂಚಿಕೊಂಡಿರುವ ಪೋಸ್ಟರ್ ಇದೀಗ ವಿವಾದಕ್ಕೆ ಕಾರಣವಾಗಿದೆ.
‘ಬಂಧ್ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಈ ಪೋಸ್ಟ್ ವಿವಾದವನ್ನು ಸೃಷ್ಟಿಸಿದೆ.

ಕಾಂಗ್ರೆಸ್ ಮಾಡಿರುವ ಈ ಪೋಸ್ಟ್'ನ್ನು ಪಾಕಿಸ್ತಾನದ ಮಾಜಿ ಸಚಿವ ಶೇರ್ ಮಾಡಿದ್ದು, ‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದಾರೆ. ಅಲ್ಲದೆ, ಹ್ಯಾಷ್ ಟ್ಯಾಗ್ ನಲ್ಲಿ ನಾಟಿ ಕಾಂಗ್ರೆಸ್ ಎಂದು ಪೋಸ್ಟ್ ಮಾಡಿದ್ದಾರೆ. ಈ ಬೆಳವಣಿಗೆ ಬಿಜೆಪಿ ಹಾಗೂ ಜನರನ್ನು ಸಿಟ್ಟಿಗೇಳುವಂತೆ ಮಾಡಿದೆ.
ಕಾಂಗ್ರೆಸ್ ಪೋಸ್ಟ್ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ಕೆಲ ನಾಯಕರನ್ನು ಒಟ್ಟಿಗೆ ಸೇರಿಸಿ, ಕಾಂಗ್ರೆಸ್ ಕೇ ಹಾತ್, ಪಾಕಿಸ್ತಾನ್ ಕೆ ಸಾಥ್ (ಕಾಂಗ್ರೆಸ್ ಕೈ ಪಾಕಿಸ್ತಾನದ ಜೊತೆಗೆ) ಎಂದು ಪೋಸ್ಟ್ ಮಾಡಿ, ತಿರುಗೇಟು ನೀಡಿದೆ.

ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಂತೆ ಮಾತನಾಡುವುದಲ್ಲದೆ, ಅವರ ಕಾರ್ಯ ಸಂಸ್ಕೃತಿ ಮತ್ತು ಪದ್ಧತಿಗಳು ಇಸ್ಲಾಮಾಬಾದ್ನಂತೆಯೇ ಇವೆ ಎಂದು ಟೀಕಿಸಿದೆ.
‘ಕಾಂಗ್ರೆಸ್ ಪಕ್ಷವು ಪ್ರಧಾನಿ ಮೋದಿಯವರ ತಲೆ ಕಾಣೆಯಾಗಿರುವ ಚಿತ್ರವನ್ನು ಹಂಚಿಕೊಂಡಿದೆ. ಇದು ಪಾಕಿಸ್ತಾನಿ ರಾಯಭಾರಿ ಭಾರತೀಯರ ಮೇಲೆ ಕತ್ತು ಸೀಳುವುದಾಗಿ ಮಾಡಿರುವ ಸನ್ಹೆಯಂತೆ ಇದೆ. ಕಾಂಗ್ರೆಸ್ ಪಾಕಿಸ್ತಾನಿಗಳ ಭಾಷೆಯಲ್ಲಿ ಮಾತನಾಡುತ್ತಿದೆ ಮತ್ತು ಭಯೋತ್ಪಾದಕರಂತೆ ವರ್ತಿಸುತ್ತಿದೆ’ ಎಂದು ಟೀಕಿಸಿದೆ.
ರಾಜ್ಯ ಬಿಜೆಪಿ ಪೋಸ್ಟ್ ಮಾಡಿ, ಕರ್ನಾಟಕದ ಕಾಂಗ್ರೆಸ್ ನಾಯಕರು ಪಾಕಿಸ್ಥಾನದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಅವಕಾಶ ಲಭಿಸಿದರೆ ಪಾಕಿಸ್ಥಾನದ ರಾಜಕೀಯದಲ್ಲೂ ಮಿಂಚಬಹುದೇನೋ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಒಬ್ಬರಿಗೆ ಯುದ್ಧ ಬೇಡವಂತೆ, ಮತ್ತೊಬ್ಬರಿಗೆ ಪಾಕಿಸ್ಥಾನ ಮಿತ್ರರಾಷ್ಟ್ರವಂತೆ, ಇನ್ನೊಬ್ಬರು ಉಗ್ರರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ತುಂಡು ಮತಗಳಿಗಾಗಿ ಪಾಕಿಸ್ಥಾನ ಪ್ರೇರಿತ ಉಗ್ರವಾದವನ್ನು ಸಮರ್ಥಿಸುವುದಾದರೆ ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವ ವ್ಯತ್ಯಾಸವಿದೆ? ಎಂದು ಪ್ರಶ್ನಿಸಿದೆ.
ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿ, ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಸ್ಲೀಪರ್ ಸೆಲ್ಗಳಂತೆ ವರ್ತಿಸುತ್ತಿದ್ದಾರೆ. ಅವರ ಬೇಜವಾಬ್ದಾರಿ ಮತ್ತು ಖಂಡನೀಯ ಹೇಳಿಕೆಗಳನ್ನು ಸಂತ್ರಸ್ತ ಕುಟುಂಬಗಳಿಗೆ ಸಾವಿನಲ್ಲೂ ಘನತೆಯನ್ನು ನಿರಾಕರಿಸುವಷ್ಟು ದೂರ ಹೋಗಿದೆ. ಉಗ್ರರ ಹತ್ಯೆಗಳಿಗೆ ಅಪಾರ ಸಾಕ್ಷ್ಯಗಳಿವೆ. ಪ್ರತ್ಯಕ್ಷದರ್ಶಿಗಳಿಂದ ಬಂದ ನೇರ ಹೇಳಿಕೆಗಳ ಹೊರತಾಗಿಯೂ, ಕಾಂಗ್ರೆಸ್ ಉಷ್ಟ್ರಪಕ್ಷಿಯಂತೆ ಮರಳಿನಲ್ಲಿ ತನ್ನ ತಲೆಯನ್ನು ಹೂತುಹಾಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
After the Congress posted an image of a bandhgala kurta, churidar pyjama and a black footwear and the caption “at the time of responsibility – Gayab” in Hindi, the BJP said this was not merely a political statement.
25-11-25 02:18 pm
Bangalore Correspondent
ಕಾಶ್ಮೀರಿ ಪಂಡಿತರಿಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ...
25-11-25 12:19 pm
ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾನು, ಡಿಕೆ ಶಿವಕು...
24-11-25 09:55 pm
Pralhad Joshi, D.K. Shivakumar: ಕಾಂಗ್ರೆಸಿನಲ್ಲ...
22-11-25 08:03 pm
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
25-11-25 04:30 pm
HK News Desk
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
24-11-25 10:08 pm
Mangalore Correspondent
ಪುತ್ತೂರಿನಲ್ಲಿ ಜವಾಬ್ದಾರಿ ನೀಡಿದರೆ ಅಭ್ಯರ್ಥಿ ಯಾರಾ...
24-11-25 08:41 pm
ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ 15 ವರ್ಷಗಳ ಬಳಿಕ...
24-11-25 11:16 am
ಕಾಸರಗೋಡಿನಲ್ಲಿ ಮಲಯಾಳೀಕರಣ ; ಡಿಸೆಂಬರ್ 3ನೇ ವಾರದಲ್...
24-11-25 11:13 am
Mangaluru and Puttur: ನ.28ರಂದು ಪ್ರಧಾನಿ ಮೋದಿ ಉ...
23-11-25 03:25 pm
25-11-25 05:03 pm
HK News Desk
ಆನ್ಲೈನ್ನಲ್ಲಿ ಅಧಿಕ ಲಾಭದ ಆಸೆಗೆ ಬಿದ್ದ ಹೊನ್ನಾವರ...
24-11-25 08:37 pm
Bajpe Yedapadavu Crime, Mangalore: ಎಡಪದವು ಬಳಿ...
24-11-25 08:37 pm
ಹೊಸಕೋಟೆ ಪಾಳುಬಿದ್ದ ಮನೆಯಲ್ಲಿ ಸಿಕ್ಕಿತ್ತು ಕೋಟಿ ಕೋ...
23-11-25 07:17 pm
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm