ಬ್ರೇಕಿಂಗ್ ನ್ಯೂಸ್
08-05-25 12:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 8 : ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದು ಇರುಮುಡಿ ಹೊತ್ತು ಅಯ್ಯಪ್ಪ ದರ್ಶನ ಪಡೆಯಲಿದ್ದಾರೆ. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ರಾಷ್ಟ್ರಪತಿ ಶಬರಿಮಲೆಗೆ ಬರುತ್ತಿರುವುದು ಇದೇ ಮೊದಲು.
ದ್ರೌಪದಿ ಮುರ್ಮು ಅವರು ಸಂಪ್ರದಾಯದಂತೆ, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಹಿಂದೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಶಬರಿಮಲೆ ಬೆಟ್ಟ ಏರುವ ಬಯಕೆ ವ್ಯಕ್ತಪಡಿಸಿದ್ದರು. ಪ್ರಧಾನಿ ಭದ್ರತಾ ಇಲಾಖೆ ಇಂದಿರಾ ಗಾಂಧಿ ನೇರವಾಗಿ ಸನ್ನಿಧಾನದಲ್ಲಿ ಇಳಿಯಲು ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು. ಆದರೆ ಆ ರೀತಿ ಬರುವುದಕ್ಕೆ ವಿರೋಧ ಕೇಳಿಬಂದಿದ್ದರಿಂದ ಅಂತಹ ಆಲೋಚನೆ ಕೈಬಿಡಲಾಗಿತ್ತು.
ಈ ಕುರಿತು ತಿರುವಾಂಕೂರು ದೇವಸ್ವಂ ಮಂಡಳಿಗೆ ರಾಷ್ಟ್ರಪತಿ ಭವನದಿಂದ ಸೂಚನೆ ಬಂದಿದೆ. ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನೂ ನೀಡಲಾಗಿದೆ. ಅದರ ಪ್ರಕಾರ ದ್ರೌಪದಿ ಮುರ್ಮು ಅವರು ಮೇ 18 ರಂದು ಪಾಲಾದ ಸೇಂಟ್ ಥಾಮಸ್ ಕಾಲೇಜಿನ ಜಯಂತಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮೇ 19 ರಂದು ಪಂಪಾಗೆ ಪ್ರಯಾಣ ಬೆಳೆಸಲಿದ್ದಾರೆ.
ದೇವಾಲಯದ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್ಗೆ ಪ್ರಯಾಣಿಸಿ ಪಂಪಾ ಬೇಸ್ ಕ್ಯಾಂಪ್ಗೆ ತೆರಳುತ್ತಾರೆ. ಯಾತ್ರಿಕರಂತೆ 4.25 ಕಿಮೀ ಎತ್ತರದ ಹಾದಿಯಲ್ಲಿ ನಡೆದು ಸಾಗುತ್ತಾರೆ. ಇವರೊಂದಿಗೆ ಎಸ್ಪಿಜಿ ಯೋಧರು ಕೂಡ ಭದ್ರತೆಯಲ್ಲಿ ಕಡಿದಾದ ರಸ್ತೆಯಲ್ಲಿ ನಡೆದು ಸಾಗಲಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ ನಲ್ಲಿ ಉಳಿದುಕೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರಪತಿಯ ಭದ್ರತೆ ಮತ್ತು ವಸತಿಗಾಗಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
President Droupadi Murmu is set to make history on May 19 by becoming the first sitting President of India to offer prayers at the Sabarimala Sree Ayyappa Temple in Kerala. The Travancore Devaswom Board (TDB), which manages the shrine, confirmed her upcoming visit, calling it a landmark moment for the temple and the nation.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm