ಬ್ರೇಕಿಂಗ್ ನ್ಯೂಸ್
10-05-25 01:58 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿದ್ದು ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ಬಗ್ಗೆ ಪಾಕಿಸ್ತಾನವೂ ಖಚಿತಪಡಿಸಿದ್ದು ತನ್ನ ಮೂರು ವಾಯುನೆಲೆ ಗುರಿಯಾಗಿಸಿ ಡ್ರೋಣ್, ಕ್ಷಿಪಣಿ ದಾಳಿ ಮಾಡಿದ್ದಾಗಿ ಹೇಳಿಕೊಂಡಿದೆ.
ಪಾಕಿಸ್ತಾನ ವಾಯುಪಡೆಯ ರಾವಲ್ಪಿಂಡಿ ಬಳಿಯ ನೂರ್ ಖಾನ್, ಮುರೀದ್ (ಚಕ್ವಾಲ್), ಜಾಂಗ್ ಜಿಲ್ಲೆಯ ರಫೀಕಿ ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ಸೇನೆ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿದೆ. ಈ ಬಗ್ಗೆ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಚೌಧರಿ ನಸುಕಿನ ನಾಲ್ಕು ಗಂಟೆಗೆ ಇಸ್ಲಮಾಬಾದ್ ನಲ್ಲಿ ಮಾಧ್ಯಮ ಹೇಳಿಕೆ ನೀಡಿದ್ದಾರೆ.
ದಾಳಿಯಿಂದಾದ ಸಾವು, ನೋವು ಬಗ್ಗೆ ಅವರು ಮಾಹಿತಿ ನೀಡಿಲ್ಲವಾದರೂ, ಭಾರತದ ಕೆಲವು ಕ್ಷಿಪಣಿಗಳು ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಮೇಲೂ ಹೋಗಿವೆ ಎಂದು ಹೇಳಿದ್ದಾರೆ. ಆದರೆ ಪಾಕಿಸ್ತಾನದ ವಾಯುಪಡೆಯ ಯಾವುದೇ ಸೊತ್ತುಗಳಿಗೆ ಹಾನಿಯಾಗಿಲ್ಲ. ಇದಲ್ಲದೆ, ಭಾರತದ ಸೇನಾ ನೆಲೆಗಳ ಮೇಲೂ ದಾಳಿ ನಡೆಸಿದ್ದು ದೊಡ್ಡ ಮಟ್ಟದ ಹಾನಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ನೂರ್ ಖಾನ್ ವಾಯುನೆಲೆ ರಾಜಧಾನಿ ಇಸ್ಲಮಾಬಾದ್ ನಗರದಿಂದ ಹತ್ತು ಕಿಮೀ ದೂರದಲ್ಲಿದೆ. ಹೀಗಾಗಿ ಪಾಕಿಸ್ತಾನ ನಾಯಕರು ಭಯಬಿದ್ದು ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವಂತಿದೆ.
ಭಾರತೀಯ ಸೇನೆಯು ಜೆಟ್ ಮತ್ತು ಡ್ರೋಣ್ ಗಳನ್ನು ಬಳಸಿ ದಾಳಿ ನಡೆಸುತ್ತಿದ್ದು ಹಲವಾರು ಕ್ಷಿಪಣಿಗಳನ್ನು ನಾವು ತಡೆದಿದ್ದೇವೆ. ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ಮಿಲಿಟರಿ ವಕ್ತಾರರು ಹೇಳಿದ್ದಾರೆ. ಇದೇ ವೇಳೆ, ಬೆಳಗ್ಗಿನಿಂದ ಪಾಕಿಸ್ತಾನದಲ್ಲಿ ಎಲ್ಲ ರೀತಿಯ ವಿಮಾನ ಸಂಚಾರವನ್ನೂ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ದೇಶದಲ್ಲಿ ಯುದ್ಧ ಸ್ಥಿತಿಯ ವಾತಾವರಣ ಇದ್ದರೂ, ಪಾಕಿಸ್ತಾನವು ತನ್ನ ದೇಶದ ಸಂಚಾರಿ ವಿಮಾನಗಳನ್ನು ನಿಲ್ಲಿಸಿರಲಿಲ್ಲ. ಆಮೂಲಕ ತನ್ನ ದೇಶದ ಜನಸಾಮಾನ್ಯರ ಜೀವದ ಜೊತೆಗೂ ಚೆಲ್ಲಾಟ ನಡೆಸುತ್ತಿದೆ. ಈ ಬಗ್ಗೆ ಭಾರತದ ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮೇ 9ರಂದು ಮಾಧ್ಯಮ ಮಾಹಿತಿ ನೀಡುತ್ತಿದ್ದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.
ಇದೇ ವೇಳೆ, ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಪಾಕಿಸ್ತಾನ ವಾಯುಪಡೆ ಭಾರತದ ವಾಯು ನೆಲೆಗೆ ದಾಳಿ ನಡೆಸಿರುವುದಾಗಿ ಹೇಳಿರುವ ಮಾತನ್ನು ತಳ್ಳಿ ಹಾಕಿದ್ದಾರೆ. ಜಗತ್ತಿಗೆ ಸುಳ್ಳಿನ ಮಾತುಗಳನ್ನು ಹೇಳುತ್ತಿದ್ದಾರೆ. ಶನಿವಾರ ಮುಂಜಾನೆ ಭಾರತ ಸೇನೆಯು ಪಾಕಿಸ್ತಾನದ 26 ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಪಾಕಿಸ್ತಾನ ಹಾರಿಬಿಟ್ಟಿದ್ದ ಹೈಸ್ಪೀಡ್ ಕ್ಷಿಪಣಿಗಳನ್ನು ಹೊಡೆದು ಹಾಕಿದ್ದಾಗಿ ಹೇಳಿದ್ದಾರೆ. ಜಮ್ಮು ಕಾಶ್ಮೀರದತ್ತ ಗುರಿಯಿಟ್ಟು ಹಾರಿಸಿದ್ದ ಡ್ರೋಣ್ ಗಳನ್ನೂ ನಿಷ್ಕ್ರಿಯ ಮಾಡಿರುವುದಾಗಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
In an apt response to a Pakistan Army officer flagging Indians' critical remarks against its government, the Centre today said such criticism is the hallmark of any open and functioning democracy and added that Pakistan's unfamiliarity with such a culture should not be surprising.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm