ಬ್ರೇಕಿಂಗ್ ನ್ಯೂಸ್
10-05-25 08:28 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಮೂರೇ ದಿನದಲ್ಲಿ ಬಿದ್ದ ಪೆಟ್ಟಿಗೆ ಪಾಕಿಸ್ತಾನವು ಗೋಣು ಬಗ್ಗಿಸಿದ್ದು ಭಾರತೀಯ ಸೇನೆಗೆ ಕದನ ವಿರಾಮಕ್ಕೆ ಕೇಳಿಕೊಂಡಿದೆ. ಇದಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದ್ದು, ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಘೋಷಿಸಲಾಗಿದೆ ಎಂದು ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
ಪಾಕಿಸ್ತಾನದ ಮಿಲಿಟರಿ ಜನರಲ್ ಭಾರತದ ಮಿಲಿಟರಿ ಜನರಲ್ ಅವರಿಗೆ ಅಪರಾಹ್ನ 3.30 ಗಂಟೆಗೆ ಕರೆ ಮಾಡಿದ್ದು, ಎರಡೂ ಕಡೆಯಿಂದ ಗುಂಡಿನ ದಾಳಿ ಮತ್ತು ಸೇನಾ ಸಂಘರ್ಷ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಂಜೆ 5 ಗಂಟೆಯಿಂದ ನೆಲ, ವಾಯು ಅಥವಾ ಸಮುದ್ರ ಮಾರ್ಗದಲ್ಲಿ ಸಂಘರ್ಷ ನಡೆಸದಿರಲು ನಿರ್ಧಾರಕ್ಕೆ ಬರಲಾಗಿದೆ ಎಂದು ವಿಕ್ರಂ ಮಿಸ್ರಿ ತಿಳಿಸಿದ್ದಾರೆ. ಎರಡೂ ಕಡೆಯಿಂದ ಸಂಘರ್ಷ ನಿಲ್ಲಿಸುವ ಬಗ್ಗೆ ಮಾತುಕತೆ ನಡೆದಿದ್ದು, ಮೇ 12ರಂದು ಈ ಬಗ್ಗೆ ಮತ್ತೊಮ್ಮೆ ಮಾತುಕತೆ ನಡೆಯಲಿದೆ ಎಂದು ಮಿಸ್ರಿ ತಿಳಿಸಿದ್ದಾರೆ.
ಭಾರತವು ಕದನ ವಿರಾಮಕ್ಕೆ ಒಪ್ಪಿಗೆ ನೀಡುತ್ತಿದ್ದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ತನ್ನ ಮಾತುಕತೆಯ ಫಲವಾಗಿ ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಬಂದಿವೆ ಎಂದಿದ್ದಾರೆ. ಸೇನಾ ಮೂಲಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಜೊತೆಗೆ ಅಮೆರಿಕದ ಅಧಿಕಾರಿಗಳು ಹಲವು ದಿನಗಳಿಂದ ಮಾತುಕತೆ ನಡೆಸಿದ್ದರು. ಇದೀಗ ಪಾಕಿಸ್ತಾನದ ಕಡೆಯಿಂದಲೇ ನೇರ ಕರೆ ಬಂದಿದ್ದರಿಂದ ಭಾರತವೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವುದಾಗಿ ತಿಳಿದುಬಂದಿದೆ.
ಮತ್ತೊಂದೆಡೆ ಅಮೆರಿಕವು ಐಎಂಎಫ್ ಮೂಲಕ ಒಂದು ಬಿಲಿಯನ್ ಡಾಲರ್ ಸಾಲವನ್ನು ಪಾಕಿಸ್ತಾನಕ್ಕೆ ನೀಡುವ ಮೂಲಕ ಕದನ ವಿರಾಮಕ್ಕೆ ಬರುವಂತೆ ಪರೋಕ್ಷ ಒತ್ತಡ ಹಾಕಿತ್ತು. ಇದಲ್ಲದೆ, ಸದ್ಯಕ್ಕೆ ಪಾಕಿಸ್ತಾನಕ್ಕೆ ಪೆಟ್ಟು ಕೊಟ್ಟಿದ್ದು ಸಾಕು, ಭವಿಷ್ಯದಲ್ಲಿ ಏನಾದರೂ ಭಯೋತ್ಪಾದಕ ಕೃತ್ಯ ನಡೆದಲ್ಲಿ ಯುದ್ಧಕ್ಕೆ ಆಹ್ವಾನ ಕೊಟ್ಟಂತೆ ಅಂದುಕೊಳ್ಳಿ ಎನ್ನುವ ಸಲಹೆಯನ್ನೂ ಭಾರತಕ್ಕೆ ಅಮೆರಿಕದ ವಕ್ತಾರರು ನೀಡಿದ್ದರು. ಇದೇ ಮಾತನ್ನು ಆಧರಿಸಿ ಭಾರತೀಯ ಮಿಲಿಟರಿ ವಕ್ತಾರರು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ.
India and Pakistan have agreed to a ceasefire on land, sea and air effective from 5 pm today, Foreign Secretary Vikram Misri announced today. Soon after the announcement, Prime Minister Narendra Modi chaired a high-level meeting at his residence. The meeting was attended by Defence Minister Rajnath Singh among others.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm