ಬ್ರೇಕಿಂಗ್ ನ್ಯೂಸ್
10-05-25 09:24 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಭಾರತ- ಪಾಕಿಸ್ತಾನ ಸೇನಾ ಸಂಘರ್ಷ ಕೊನೆಗೊಳಿಸುವ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಭಾರತೀಯ ಸೇನೆ ಪರವಾಗಿ ಕರ್ನಲ್ ಸೋಫಿಯಾ ಖುರೇಷಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಭಾರತದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್ ಕ್ಷಿಪಣಿಗೆ ಹಾನಿಯಾಗಿದೆ ಎಂದು ಪಾಕಿಸ್ತಾನ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಜೆಎಫ್-17 ಫೈಟರ್ ಜೆಟ್ ಮೂಲಕ ಹಾನಿ ಮಾಡಿದ್ದೇವೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ತಿಳಿಸಿದ್ದಾರೆ.
ಇದಲ್ಲದೆ, ನಮ್ಮ ಸೇನಾ ನೆಲೆಗಳಾದ ಸಿರ್ಸಾ, ಜಮ್ಮು, ಪಠಾಣ್ ಕೋಟ್, ಭತಿಂಡಾ, ನಾಲಿಯಾ ಮತ್ತು ಭುಜ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಅಂತಹ ಯಾವುದೇ ಘಟನೆ ಆಗಿಲ್ಲ. ಮೂರನೇಯದಾಗಿ ನಮ್ಮ ಶಸ್ತ್ರಾಗಾರ ಇರುವ ಚಂಡೀಗಢ ಮತ್ತು ವ್ಯಾಸ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಇದೇ ವೇಳೆ, ಭಾರತೀಯ ಸೇನೆಯು ಮಸೀದಿಗಳನ್ನು ಡ್ಯಾಮೇಜ್ ಮಾಡಿದೆ ಎಂಬುದಾಗಿಯೂ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ನಾನು ಈ ಬಗ್ಗೆ ಸ್ಪಷ್ಟನೆ ನೀಡುವುದೇನಂದರೆ, ಭಾರತವು ಜಾತ್ಯತೀತ ದೇಶವಾಗಿದ್ದು, ನಮ್ಮ ಸೇನೆಯು ದೇಶದ ಸಂವಿಧಾನದ ಮೌಲ್ಯಗಳನ್ನು ಅಷ್ಟೇ ಸುಂದರವಾಗಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಶನ್ ಸಿಂಧೂರ್ ಹೆಸರಲ್ಲಿ ಪಾಕಿಸ್ತಾನದ ಒಂಬತ್ತು ಕಡೆ ಉಗ್ರವಾದಿ ಶಿಬಿರಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನವು ಸುಳ್ಳು ಸುದ್ದಿ ಹಬ್ಬಿಸುತ್ತ ತನ್ನ ಸೇನೆಯೂ ಭಾರತದ ಡ್ರೋಣ್ ಗಳನ್ನು, ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿದ್ದಾಗಿ ಸುಳ್ಳು ಮಾಹಿತಿ ನೀಡಿತ್ತು. ಆದರೆ ಅದಕ್ಕೆ ಯಾವುದೇ ಸಾಕ್ಷಿ ನೀಡಲು ವಿಫಲವಾಗಿತ್ತು.
Addressing the press briefing following the announcement of the India-Pakistan ceasefire, the Indian Armed Forces on Saturday exposed Pakistan's misinformation campaign and false narratives it peddled during the recent conflict. Colonel Sofiya Qureshi termed Pakistani claims that India's S-400 and BrahMos missile bases were destroyed by Pakistan Air Force's JF-17 "completely wrong". She said Pakistan "ran a misinformation campaign that our airfields in Sirsa, Jammu, Pathankot, Bhatinda, Nalia and Bhuj were damaged, and its misinformation is also completely wrong."
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm