ಬ್ರೇಕಿಂಗ್ ನ್ಯೂಸ್
10-05-25 11:05 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಪಾಕಿಸ್ತಾನ ಮತ್ತು ಅಲ್ಲಿನ ಭಯೋತ್ಪಾದಕರು ತಮ್ಮ ನರಿ ಬುದ್ಧಿ ಬಿಟ್ಟಿಲ್ಲ. ಭಾರತ ಕದನ ವಿರಾಮ ಘೋಷಣೆ ಮಾಡಿದ್ದರೂ ಕೆಲವೇ ಗಂಟೆಗಳಲ್ಲಿ ಗಡಿಭಾಗದ ಉದ್ದಕ್ಕೂ ಗುಂಡಿನ ಸದ್ದು ಕೇಳಿಬಂದಿದೆ. ಡ್ರೋಣ್ ಹಾರಾಟವೂ ಅಲ್ಲಲ್ಲಿ ಆಗತೊಡಗಿದೆ. ಜಮ್ಮು ಕಾಶ್ಮೀರದ ಉರಿ, ಪೂಂಛ್, ರಜೌರಿ, ಪಂಜಾಬ್ ರಾಜ್ಯದ ಗಡಿಜಿಲ್ಲೆ ಗುರುದಾಸ್ ಪುರದಲ್ಲಿ ಡ್ರೋಣ್ ಹಾರಾಟ ಆಗಿದೆ. ಗಡಿಭಾಗದಲ್ಲಿ ಸೇನಾ ಪಡೆ ತೀವ್ರ ನಿಗಾ ಇಟ್ಟಿದ್ದು, ದಾಳಿಯಾದ್ರೆ ಪ್ರತಿದಾಳಿಗೆ ಸಿದ್ಧವಾಗಿದೆ.
ಕೆಲವು ದಿನಗಳಿಂದ ತೀವ್ರ ಶೆಲ್ ದಾಳಿಗೆ ಸಾಕ್ಷಿಯಾಗಿದ್ದ ಕಾಶ್ಮೀರದ ಗಡಿಜಿಲ್ಲೆಗಳಲ್ಲಿ ದಾಳಿಗಳು ನಿಂತಿದ್ದರೂ, ಆಗೊಮ್ಮೆ ಈಗೊಮ್ಮೆ ಎನ್ನುವಂತೆ ಗುಂಡಿನ ಸದ್ದು ಕೇಳುತ್ತಿದೆ. ಗಡಿಭಾಗದ ಜಿಲ್ಲೆಗಳು ಸತತ ನಾಲ್ಕನೇ ದಿನವೂ ಕತ್ತಲಲ್ಲೇ ಮುಳುಗಿವೆ. ಇದೇ ವೇಳೆ, ಪಂಜಾಬಿನ ಫಿರೋಜ್ ಪುರದಲ್ಲಿ ಏರ್ ಡಿಫೆನ್ಸ್ ಸಿಸ್ಟಮ್ ಸೈರನ್ ಮೊಳಗಿಸಿದೆ. ರಾಡಾರಿನಲ್ಲಿ ಶತ್ರುಗಳ ಹಾರಾಟ ಕಂಡುಬಂದರೆ ಮಾತ್ರ ಸೈರನ್ ಮೊಳಗುತ್ತದೆ.

ಪಂಜಾಬಿನ ಗುರುದಾಸ್ ಪುರ, ಫಿರೋಜ್ ಪುರ, ಪಠಾಣ್ ಕೋಟ್, ಹೊಶಿಯಾರ್ ಪುರ, ಜಲಂಧರ್ ಮತ್ತು ಫರೀದ್ ಕೋಟ್ ನಲ್ಲಿ ಡ್ರೋಣ್ ಹಾರಾಟ ಕಣ್ಣಿಗೆ ಕಂಡಿದೆ. ಪಾಕಿಸ್ತಾನಕ್ಕೆ ಹೊಂದಿಕೊಂಡ ರಾಜಸ್ಥಾನ ಗಡಿಭಾಗದಲ್ಲಿಯೂ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದಾರೆ. ಗುಂಡಿನ ದಾಳಿ ಆಗಿರುವುದರಿಂದ ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ವಿದ್ಯುತ್ ದೀಪಗಳನ್ನು ಉರಿಸದಂತೆ ಎಲ್ಲ ಲೈಟ್ ಆಫ್ ಮಾಡಲು ಜಿಲ್ಲಾಡಳಿತಗಳು ಸೂಚನೆ ಸಾರ್ವಜನಿಕರಿಗೆ ಸೂಚನೆ ನೀಡಿವೆ. ಗುಜರಾತಿನ ಕಛ್ ಪ್ರದೇಶದಲ್ಲೂ ಡ್ರೋಣ್ ಹಾರಾಟ ಕಾಣಿಸಿಕೊಂಡಿದೆ. ಅಮೃತಸರ ಜಿಲ್ಲೆಯಲ್ಲೂ ಏರ್ ಡಿಫೆನ್ಸ್ ಸೈರನ್ ಮೊಳಗಿಸಿದೆ. ಜಮ್ಮು ಕಾಶ್ಮೀರದ ನಗ್ರೋಟಾ ಪ್ರದೇಶದಲ್ಲಿ ತೀವ್ರ ಗುಂಡಿನ ಚಕಮಕಿಯಾಗಿದ್ದು, ಉಗ್ರರು ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆನ್ನುವ ಮಾಹಿತಿ ಇದೆ.
ಇದೇ ವೇಳೆ, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದು, ಕಾಶ್ಮೀರದಲ್ಲಿ ಗುಂಡಿನ ಸದ್ದು ಕೇಳುತ್ತಿದ್ದು, ಎಲ್ಲಿದೆ ಕದನ ವಿರಾಮ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ, ಚೀನಾ ವಿದೇಶಾಂಗ ಮಂತ್ರಿ ವಾಂಗ್ ಯೀ ಪಾಕಿಸ್ತಾನದ ವಿದೇಶ ಸಚಿವ ಇಷಾಕ್ ದಾರ್ ಜೊತೆಗೆ ಫೋನ್ ಸಂಭಾಷಣೆ ಮಾಡಿದ ವೇಳೆ, ದೇಶದ ಸ್ವಾತಂತ್ರ್ಯ, ಸಮಗ್ರತೆ, ಗಡಿಭಾಗ ಉಳಿಸಿಕೊಳ್ಳುವ ದೃಷ್ಟಿಯಿಂದ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ವಾಗ್ದಾನ ನೀಡಿದ್ದಾರೆ. ಮೇ 10ರ ಸಂಜೆ 5 ಗಂಟೆಯಿಂದ ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿತ್ತು.
Nuclear-armed neighbours India and Pakistan agreed to a ceasefire on Saturday after U.S. pressure and diplomacy, announcing a sudden stop to a conflict that had seemed to be spiralling alarmingly.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm