ಬ್ರೇಕಿಂಗ್ ನ್ಯೂಸ್
13-05-25 08:47 pm HK News Desk ದೇಶ - ವಿದೇಶ
ನವದೆಹಲಿ, ಮೇ 13 : ಗಡಿಭಾಗದ ಪಂಜಾಬಿನ ಆದಂಪುರ ವಾಯುನೆಲೆಯನ್ನು ಧ್ವಂಸ ಮಾಡಿದ್ದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆದಂಪುರ ವಾಯುನೆಲೆಗೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಳ್ಳು ಹೇಳುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಮತ್ತೆಂದೂ ಉಗ್ರವಾದ ಬಗ್ಗೆ ಪಾಕಿಸ್ತಾನ ಯೋಚಿಸಲೂ ಬಾರದು. ಆ ರೀತಿ ಯೋಚಿಸಿದವರು ಮತ್ತು ಅವರಿಗೆ ಕುಮ್ಮಕ್ಕು ನೀಡಿದವರ ಮನೆಯೊಳಗೆ ನುಗ್ಗಿ ಹೊಡೆದು ಸಾಯಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಆಪರೇಷನ್ ಸಿಂಧೂರ ಮೂಲಕ ನಾವು ಕೇವಲ, ಉಗ್ರರ ಅಡಗುತಾಣ ಹಾಗೂ ಪಾಕಿಸ್ತಾನದ ವಾಯುನೆಲೆಗಳನ್ನು ಮಾತ್ರ ನಾಶ ಮಾಡಿದ್ದಲ್ಲ, ಅವರ ದುಷ್ಟ ಉದ್ದೇಶಗಳು ಮತ್ತು ಆತ್ಮಸ್ಥೈರ್ಯವನ್ನೂ ಸೋಲಿಸಿದ್ದೇವೆ ಎಂದು ಮೋದಿ ಹೇಳಿದರು. ವಾಯುನೆಲೆಯಲ್ಲಿ ಸೇರಿದ್ದ ವಾಯುಪಡೆ ಸೈನಿಕರಿಗೆ ಸೆಲ್ಯೂಟ್ ಹೊಡೆದು ಅವರ ಜೊತೆಗೆ ಬೆರೆತು ಸಂವಾದ ನಡೆಸಿದ ಪ್ರಧಾನಿ ಮೋದಿ, ಪಾಕಿಸ್ತಾನ ವಿರುದ್ಧ ಆರ್ಭಟಿಸಿದರು.
ಭಾರತದ ಮೇಲೆ ಯಾವುದೇ ಭಯೋತ್ಪಾದಕ ದಾಳಿ ನಡೆದರೂ, ನಮ್ಮದೇ ರೀತಿಯಲ್ಲಿ ತಿರುಗೇಟು ನೀಡುತ್ತೇವೆ. ಇದರ ಜೊತೆಗೆ, ಭಾರತ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಮೂರನೆಯದಾಗಿ, ಭಯೋತ್ಪಾದನೆಯನ್ನು ಪೋಷಿಸುವ ಸರ್ಕಾರ ಮತ್ತು ಭಯೋತ್ಪಾದನೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವೆರಡೂ ಒಂದೇ ಎಂದು ನೋಡುತ್ತೇವೆ ಎಂದರು.
“ಹರ್ ಘರ್ ಮೇ ಘುಸ್ಕೇ ಮಾರೇಂಗೆ” (“ನಾವು ಪ್ರತಿ ಮನೆಗೂ ನುಗ್ಗಿ ಹೊಡೆಯುತ್ತೇವೆ) ಎಂದು ಹೇಳಿದ ಮೋದಿ, ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಯಾವುದೇ ಸ್ಥಳವೂ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ. ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ನೀಡಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಗಳನ್ನು ಹಿಡಿಯುವುದು ಸಂಪ್ರದಾಯ. ನಮ್ಮ ಸಹೋದರಿಯರು ಮತ್ತು ಹೆಣ್ಣು ಮಕ್ಕಳ ಸಿಂಧೂರವನ್ನು ಕಸಿದುಕೊಂಡ ಉಗ್ರರನ್ನು ಅವರ ಮನೆಗಳಿಗೆ ನುಗ್ಗಿ ಹೊಡೆದಿದ್ದೇವೆ ಎಂದು ಮೋದಿ ಹೇಳಿದ್ದಾರೆ.
One photograph did all the talking. Prime Minister Narendra Modi’s unannounced visit to Adampur airbase on Tuesday morning was not just symbolic — it was strategic. In one now-viral image, Modi is seen waving to airmen with a MiG-29 fighter and an undamaged S-400 missile defence system clearly visible behind him.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm