ಬ್ರೇಕಿಂಗ್ ನ್ಯೂಸ್
13-05-25 08:47 pm HK News Desk ದೇಶ - ವಿದೇಶ
ನವದೆಹಲಿ, ಮೇ 13 : ಗಡಿಭಾಗದ ಪಂಜಾಬಿನ ಆದಂಪುರ ವಾಯುನೆಲೆಯನ್ನು ಧ್ವಂಸ ಮಾಡಿದ್ದಾಗಿ ಪಾಕಿಸ್ತಾನ ಹೇಳಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆದಂಪುರ ವಾಯುನೆಲೆಗೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಳ್ಳು ಹೇಳುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಮತ್ತೆಂದೂ ಉಗ್ರವಾದ ಬಗ್ಗೆ ಪಾಕಿಸ್ತಾನ ಯೋಚಿಸಲೂ ಬಾರದು. ಆ ರೀತಿ ಯೋಚಿಸಿದವರು ಮತ್ತು ಅವರಿಗೆ ಕುಮ್ಮಕ್ಕು ನೀಡಿದವರ ಮನೆಯೊಳಗೆ ನುಗ್ಗಿ ಹೊಡೆದು ಸಾಯಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಆಪರೇಷನ್ ಸಿಂಧೂರ ಮೂಲಕ ನಾವು ಕೇವಲ, ಉಗ್ರರ ಅಡಗುತಾಣ ಹಾಗೂ ಪಾಕಿಸ್ತಾನದ ವಾಯುನೆಲೆಗಳನ್ನು ಮಾತ್ರ ನಾಶ ಮಾಡಿದ್ದಲ್ಲ, ಅವರ ದುಷ್ಟ ಉದ್ದೇಶಗಳು ಮತ್ತು ಆತ್ಮಸ್ಥೈರ್ಯವನ್ನೂ ಸೋಲಿಸಿದ್ದೇವೆ ಎಂದು ಮೋದಿ ಹೇಳಿದರು. ವಾಯುನೆಲೆಯಲ್ಲಿ ಸೇರಿದ್ದ ವಾಯುಪಡೆ ಸೈನಿಕರಿಗೆ ಸೆಲ್ಯೂಟ್ ಹೊಡೆದು ಅವರ ಜೊತೆಗೆ ಬೆರೆತು ಸಂವಾದ ನಡೆಸಿದ ಪ್ರಧಾನಿ ಮೋದಿ, ಪಾಕಿಸ್ತಾನ ವಿರುದ್ಧ ಆರ್ಭಟಿಸಿದರು.
ಭಾರತದ ಮೇಲೆ ಯಾವುದೇ ಭಯೋತ್ಪಾದಕ ದಾಳಿ ನಡೆದರೂ, ನಮ್ಮದೇ ರೀತಿಯಲ್ಲಿ ತಿರುಗೇಟು ನೀಡುತ್ತೇವೆ. ಇದರ ಜೊತೆಗೆ, ಭಾರತ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಮೂರನೆಯದಾಗಿ, ಭಯೋತ್ಪಾದನೆಯನ್ನು ಪೋಷಿಸುವ ಸರ್ಕಾರ ಮತ್ತು ಭಯೋತ್ಪಾದನೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವೆರಡೂ ಒಂದೇ ಎಂದು ನೋಡುತ್ತೇವೆ ಎಂದರು.
“ಹರ್ ಘರ್ ಮೇ ಘುಸ್ಕೇ ಮಾರೇಂಗೆ” (“ನಾವು ಪ್ರತಿ ಮನೆಗೂ ನುಗ್ಗಿ ಹೊಡೆಯುತ್ತೇವೆ) ಎಂದು ಹೇಳಿದ ಮೋದಿ, ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಯಾವುದೇ ಸ್ಥಳವೂ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ. ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ನೀಡಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಗಳನ್ನು ಹಿಡಿಯುವುದು ಸಂಪ್ರದಾಯ. ನಮ್ಮ ಸಹೋದರಿಯರು ಮತ್ತು ಹೆಣ್ಣು ಮಕ್ಕಳ ಸಿಂಧೂರವನ್ನು ಕಸಿದುಕೊಂಡ ಉಗ್ರರನ್ನು ಅವರ ಮನೆಗಳಿಗೆ ನುಗ್ಗಿ ಹೊಡೆದಿದ್ದೇವೆ ಎಂದು ಮೋದಿ ಹೇಳಿದ್ದಾರೆ.
One photograph did all the talking. Prime Minister Narendra Modi’s unannounced visit to Adampur airbase on Tuesday morning was not just symbolic — it was strategic. In one now-viral image, Modi is seen waving to airmen with a MiG-29 fighter and an undamaged S-400 missile defence system clearly visible behind him.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm