ಬ್ರೇಕಿಂಗ್ ನ್ಯೂಸ್
14-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆ ಕುರಿತಾಗಿ ದೇಶವಿರೋಧಿ ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್ಗಳನ್ನು ಮಾಡಿದ್ದ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಿಸಿದ್ದು 25 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಆನ್ಲೈನ್ನಲ್ಲಿ ಸುಳ್ಳು ಅಥವಾ ಪ್ರಚೋದನಕಾರಿ ಹೇಳಿಕೆ ಫೋಸ್ಟ್ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಅವರ ಮೇಲ್ವಿಚಾರಣೆಯಡಿಯಲ್ಲಿ ವಿಶೇಷ ತಂಡವು ಪೊಲೀಸ್ ಪ್ರಧಾನ ಕಚೇರಿಯ ಸಾಮಾಜಿಕ ಮಾಧ್ಯಮ ಕೇಂದ್ರದಿಂದ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಿದೆ.
ಇಲ್ಲಿಯವರೆಗೂ 40 ಖಾತೆಗಳನ್ನು ಗುರುತಿಸಲಾಗಿದೆ ಮತ್ತು ಆಯಾ ಜಿಲ್ಲೆಗಳಲ್ಲಿ ಅವರ ವಿರುದ್ಧ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಟ್ಟು 25 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೈಬರ್ ಕ್ರೈಂ ಪ್ರಧಾನ ಕಚೇರಿಯ ಮೂಲಕ ಎಲ್ಲಾ 40 ಖಾತೆಗಳನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವದಂತಿಗಳನ್ನು ಹಬ್ಬಿಸುವ, ನಾಗರಿಕರನ್ನು ದಾರಿ ತಪ್ಪಿಸುವ ಅಥವಾ ಭಾರತೀಯ ಸೇನೆಯ ಪ್ರತಿಷ್ಠೆಗೆ ಕಳಂಕ ತರುವ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಡಿಜಿಪಿ ಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
AS PART of a statewide crackdown on “anti-national and misleading content” circulating on social media in connection with the recent Operation Sindoor carried out by the Indian armed forces, the Uttar Pradesh Police on Tuesday said it has so far identified 37 accounts responsible for “spreading rumours and misinformation” online.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm