ಬ್ರೇಕಿಂಗ್ ನ್ಯೂಸ್
19-05-25 02:25 pm HK News Desk ದೇಶ - ವಿದೇಶ
ವಿಶಾಖಪಟ್ಟಣ, ಮೇ 19 : ಮಕ್ಕಳು ಆಟವಾಡುತ್ತಿದ್ದಾಗ ಮಳೆ ಬಂತೆಂದು ಆಶ್ರಯಕ್ಕಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಒಳಗೆ ಹೋಗಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಲಾಕ್ ಆಗಿದ್ದರಿಂದ ಯಾರಿಗೂ ತಿಳಿಯದೆ ನಾಲ್ವರು ಮಕ್ಕಳು ದುರಂತ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದ್ವಾರಮುಡಿ ಗ್ರಾಮದಲ್ಲಿ ನಡೆದಿದೆ.
ಮಾಂಗಿ ಉದಯ್ (8), ಬುರ್ಲೆ ಚಾರುಮತಿ(8), ಬುರ್ಲೆ ಚರಿಷ್ಮಾ(6), ಮನಸ್ವಿನಿ(6) ಮೃತ ಮಕ್ಕಳು. ಈ ಪೈಕಿ ಚಾರುಮತಿ ಮತ್ತು ಚರಿಷ್ಮಾ ಸೋದರಿಯರಾಗಿದ್ದು, ಇನ್ನಿಬ್ವರು ಇವರ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮನೆಯಿಂದ ಹೊರಗಡೆ ಆಡಲು ಹೋಗಿದ್ದ ಮಕ್ಕಳು ತುಂಬ ಹೊತ್ತಾದರೂ ಬಂದಿರಲಿಲ್ಲ. ಆನಂತರ ನಾಲ್ವರು ಮಕ್ಕಳ ಮನೆಮಂದಿ, ಅಕ್ಕ ಪಕ್ಕದ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮೂರು ಗಂಟೆ ಕಾಲ ಹುಡುಕಿದರೂ ಸಿಕ್ಕಿರಲಿಲ್ಲ. ಸಂಜೆ ಹೊತ್ತಿಗೆ ಪಕ್ಕದ ಮಹಿಳಾ ಮಂಡಳಿಯ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನ ಒಳಗಡೆ ಮಕ್ಕಳಿರುವುದು ಪತ್ತೆಯಾಗಿತ್ತು.
ಕೂಡಲೇ ಕಾರಿನ ಗ್ಲಾಸ್ ಒಡೆದು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಉಸಿರಾಟ ಸಾಧ್ಯವಾಗದೆ ಮತ್ತು ಕಾರಿನ ಒಳಗಡೆಯ ಬಿಸಿಯಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ಆಡಲು ಹೋಗಿದ್ದಾಗ ಮಳೆ ಬಂತೆಂದು ಅಲ್ಲಿಯೇ ಇದ್ದ ಕಾರಿನಲ್ಲಿ ಆಸರೆ ಪಡೆದಿದ್ದಾರೆ. ಆದರೆ ಕಾರು ತನ್ನಿಂತಾನೇ ಲಾಕ್ ಆಗಿದ್ದರಿಂದ ಒಳಗಡೆ ಸಿಲುಕಿದ್ದು ನಾಲ್ವರು ಕೂಡ ದುರಂತ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ದು, ಲಾಕ್ ಆಗಿದ್ಯಾ ಎಂದು ಗಮನಿಸದೆ ಬಿಟ್ಟು ಹೋಗಿದ್ದರು. ಮಳೆ ಬರುತ್ತಿದ್ದಾಗ ಸೆನ್ಸಾರ್ ಆಗಿ ಅಕಸ್ಮಾತ್ ಓಪನ್ ಆಗಿದ್ದು, ಮಕ್ಕಳು ಒಳಗಡೆ ಹೋಗಿ ಸಿಕ್ಕಿಕೊಂಡು ಪ್ರಾಣ ತ್ಯಜಿಸಿದ್ದಾರೆ.
In a heart-wrenching tragedy, four children suffocated to death inside a locked car in Andhra Pradesh's Vijayanagaram district on Sunday. The tragedy struck Dwarapudi village under Vijayanagaram Cantonment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm