ಬ್ರೇಕಿಂಗ್ ನ್ಯೂಸ್
19-05-25 02:25 pm HK News Desk ದೇಶ - ವಿದೇಶ
ವಿಶಾಖಪಟ್ಟಣ, ಮೇ 19 : ಮಕ್ಕಳು ಆಟವಾಡುತ್ತಿದ್ದಾಗ ಮಳೆ ಬಂತೆಂದು ಆಶ್ರಯಕ್ಕಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಒಳಗೆ ಹೋಗಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಲಾಕ್ ಆಗಿದ್ದರಿಂದ ಯಾರಿಗೂ ತಿಳಿಯದೆ ನಾಲ್ವರು ಮಕ್ಕಳು ದುರಂತ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದ್ವಾರಮುಡಿ ಗ್ರಾಮದಲ್ಲಿ ನಡೆದಿದೆ.
ಮಾಂಗಿ ಉದಯ್ (8), ಬುರ್ಲೆ ಚಾರುಮತಿ(8), ಬುರ್ಲೆ ಚರಿಷ್ಮಾ(6), ಮನಸ್ವಿನಿ(6) ಮೃತ ಮಕ್ಕಳು. ಈ ಪೈಕಿ ಚಾರುಮತಿ ಮತ್ತು ಚರಿಷ್ಮಾ ಸೋದರಿಯರಾಗಿದ್ದು, ಇನ್ನಿಬ್ವರು ಇವರ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮನೆಯಿಂದ ಹೊರಗಡೆ ಆಡಲು ಹೋಗಿದ್ದ ಮಕ್ಕಳು ತುಂಬ ಹೊತ್ತಾದರೂ ಬಂದಿರಲಿಲ್ಲ. ಆನಂತರ ನಾಲ್ವರು ಮಕ್ಕಳ ಮನೆಮಂದಿ, ಅಕ್ಕ ಪಕ್ಕದ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮೂರು ಗಂಟೆ ಕಾಲ ಹುಡುಕಿದರೂ ಸಿಕ್ಕಿರಲಿಲ್ಲ. ಸಂಜೆ ಹೊತ್ತಿಗೆ ಪಕ್ಕದ ಮಹಿಳಾ ಮಂಡಳಿಯ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನ ಒಳಗಡೆ ಮಕ್ಕಳಿರುವುದು ಪತ್ತೆಯಾಗಿತ್ತು.
ಕೂಡಲೇ ಕಾರಿನ ಗ್ಲಾಸ್ ಒಡೆದು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಉಸಿರಾಟ ಸಾಧ್ಯವಾಗದೆ ಮತ್ತು ಕಾರಿನ ಒಳಗಡೆಯ ಬಿಸಿಯಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ಆಡಲು ಹೋಗಿದ್ದಾಗ ಮಳೆ ಬಂತೆಂದು ಅಲ್ಲಿಯೇ ಇದ್ದ ಕಾರಿನಲ್ಲಿ ಆಸರೆ ಪಡೆದಿದ್ದಾರೆ. ಆದರೆ ಕಾರು ತನ್ನಿಂತಾನೇ ಲಾಕ್ ಆಗಿದ್ದರಿಂದ ಒಳಗಡೆ ಸಿಲುಕಿದ್ದು ನಾಲ್ವರು ಕೂಡ ದುರಂತ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ದು, ಲಾಕ್ ಆಗಿದ್ಯಾ ಎಂದು ಗಮನಿಸದೆ ಬಿಟ್ಟು ಹೋಗಿದ್ದರು. ಮಳೆ ಬರುತ್ತಿದ್ದಾಗ ಸೆನ್ಸಾರ್ ಆಗಿ ಅಕಸ್ಮಾತ್ ಓಪನ್ ಆಗಿದ್ದು, ಮಕ್ಕಳು ಒಳಗಡೆ ಹೋಗಿ ಸಿಕ್ಕಿಕೊಂಡು ಪ್ರಾಣ ತ್ಯಜಿಸಿದ್ದಾರೆ.
In a heart-wrenching tragedy, four children suffocated to death inside a locked car in Andhra Pradesh's Vijayanagaram district on Sunday. The tragedy struck Dwarapudi village under Vijayanagaram Cantonment.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm