ಬ್ರೇಕಿಂಗ್ ನ್ಯೂಸ್
19-05-25 02:25 pm HK News Desk ದೇಶ - ವಿದೇಶ
ವಿಶಾಖಪಟ್ಟಣ, ಮೇ 19 : ಮಕ್ಕಳು ಆಟವಾಡುತ್ತಿದ್ದಾಗ ಮಳೆ ಬಂತೆಂದು ಆಶ್ರಯಕ್ಕಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಒಳಗೆ ಹೋಗಿದ್ದು ಕೆಲವೇ ಕ್ಷಣಗಳಲ್ಲಿ ಕಾರು ಲಾಕ್ ಆಗಿದ್ದರಿಂದ ಯಾರಿಗೂ ತಿಳಿಯದೆ ನಾಲ್ವರು ಮಕ್ಕಳು ದುರಂತ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದ್ವಾರಮುಡಿ ಗ್ರಾಮದಲ್ಲಿ ನಡೆದಿದೆ.
ಮಾಂಗಿ ಉದಯ್ (8), ಬುರ್ಲೆ ಚಾರುಮತಿ(8), ಬುರ್ಲೆ ಚರಿಷ್ಮಾ(6), ಮನಸ್ವಿನಿ(6) ಮೃತ ಮಕ್ಕಳು. ಈ ಪೈಕಿ ಚಾರುಮತಿ ಮತ್ತು ಚರಿಷ್ಮಾ ಸೋದರಿಯರಾಗಿದ್ದು, ಇನ್ನಿಬ್ವರು ಇವರ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಮನೆಯಿಂದ ಹೊರಗಡೆ ಆಡಲು ಹೋಗಿದ್ದ ಮಕ್ಕಳು ತುಂಬ ಹೊತ್ತಾದರೂ ಬಂದಿರಲಿಲ್ಲ. ಆನಂತರ ನಾಲ್ವರು ಮಕ್ಕಳ ಮನೆಮಂದಿ, ಅಕ್ಕ ಪಕ್ಕದ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮೂರು ಗಂಟೆ ಕಾಲ ಹುಡುಕಿದರೂ ಸಿಕ್ಕಿರಲಿಲ್ಲ. ಸಂಜೆ ಹೊತ್ತಿಗೆ ಪಕ್ಕದ ಮಹಿಳಾ ಮಂಡಳಿಯ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನ ಒಳಗಡೆ ಮಕ್ಕಳಿರುವುದು ಪತ್ತೆಯಾಗಿತ್ತು.
ಕೂಡಲೇ ಕಾರಿನ ಗ್ಲಾಸ್ ಒಡೆದು ಅಸ್ವಸ್ಥ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಉಸಿರಾಟ ಸಾಧ್ಯವಾಗದೆ ಮತ್ತು ಕಾರಿನ ಒಳಗಡೆಯ ಬಿಸಿಯಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ಆಡಲು ಹೋಗಿದ್ದಾಗ ಮಳೆ ಬಂತೆಂದು ಅಲ್ಲಿಯೇ ಇದ್ದ ಕಾರಿನಲ್ಲಿ ಆಸರೆ ಪಡೆದಿದ್ದಾರೆ. ಆದರೆ ಕಾರು ತನ್ನಿಂತಾನೇ ಲಾಕ್ ಆಗಿದ್ದರಿಂದ ಒಳಗಡೆ ಸಿಲುಕಿದ್ದು ನಾಲ್ವರು ಕೂಡ ದುರಂತ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ದು, ಲಾಕ್ ಆಗಿದ್ಯಾ ಎಂದು ಗಮನಿಸದೆ ಬಿಟ್ಟು ಹೋಗಿದ್ದರು. ಮಳೆ ಬರುತ್ತಿದ್ದಾಗ ಸೆನ್ಸಾರ್ ಆಗಿ ಅಕಸ್ಮಾತ್ ಓಪನ್ ಆಗಿದ್ದು, ಮಕ್ಕಳು ಒಳಗಡೆ ಹೋಗಿ ಸಿಕ್ಕಿಕೊಂಡು ಪ್ರಾಣ ತ್ಯಜಿಸಿದ್ದಾರೆ.
In a heart-wrenching tragedy, four children suffocated to death inside a locked car in Andhra Pradesh's Vijayanagaram district on Sunday. The tragedy struck Dwarapudi village under Vijayanagaram Cantonment.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm