ಬ್ರೇಕಿಂಗ್ ನ್ಯೂಸ್
20-05-25 01:42 pm HK News Desk ದೇಶ - ವಿದೇಶ
ನವದೆಹಲಿ, ಮೇ 20 : ಪಾಕಿಸ್ತಾನ ಜೊತೆಗೆ ಯುದ್ಧ ಬೇಡ ಎಂದಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನದ ಮೀಡಿಯಾಗಳಲ್ಲಿ ಸುದ್ದಿಯಾಗಿದ್ದರು. ಇದೀಗ ಪಾಕ್ ಮೇಲಿನ ದಾಳಿ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ರಾಹುಲ್ ಗಾಂಧಿ ಅವರೂ ಪಾಕ್ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಲವು ಪ್ರಶ್ನೆಗಳನ್ನು ಎತ್ತಿದ್ದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಉತ್ತರ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಲಾಗಿತ್ತಾ? ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾರತ ತನ್ನ ವಿಮಾನಗಳನ್ನು ಕಳೆದುಕೊಂಡಿದೆಯಾ? ಕಳೆದುಕೊಂಡಿದ್ದರೆ ಎಷ್ಟು ವಿಮಾನ? ಅವುಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು. ಈ ಮಾಹಿತಿಯನ್ನು ದೇಶದ ಜನತೆ ತಿಳಿದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಪ್ರಶ್ನೆಗಳನ್ನು ಎತ್ತಿದ್ದರು.
ಆದರೆ ರಾಹುಲ್ ಗಾಂಧಿ ಭಾರತದಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿರುವುದಕ್ಕಾಗಿ ಪಾಕಿಸ್ತಾನದ ಟಿವಿ ಚಾನೆಲ್ಗಳಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಪಾಕ್ ಸುದ್ದಿ ವಾಹಿನಿಗಳ ಚರ್ಚೆಗಳಲ್ಲೂ ರಾಹುಲ್ ಹೇಳಿಕೆ ಮುಖ್ಯ ವಿಷಯವಾಗಿದೆ. ಮೋದಿ ಅವರಿಗೆ ರಾಹುಲ್ ಗಾಂಧಿ ಅವರು ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಮೋದಿ ಸರ್ಕಾರ ಉತ್ತರ ಕೊಡುತ್ತಾ? ಎಂಬ ಪ್ರಶ್ನೆಯನ್ನು ಟಿವಿ ವಾಹಿನಿಗಳು ಎತ್ತಿವೆ.
ರಾಹುಲ್ ಗಾಂಧಿ ಏನು ಹೇಳಿದ್ದರು ?
ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವೇ ಹೇಳುವಂತೆ, ಅದು ಶಾಪಗ್ರಸ್ತ. ಹಾಗಾಗಿ ನಾನು ಮತ್ತೊಮ್ಮೆ ಕೇಳುತ್ತೇನೆ, ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸುವ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?' ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪ್ರಶ್ನಿಸಿದ್ದಾರೆ. 'ಇದೊಂದು ಲೋಪವಲ್ಲ. ಬದಲಿಗೆ ಇದು ಅಪರಾಧ ಮತ್ತು ರಾಷ್ಟ್ರವು ಸತ್ಯವನ್ನು ತಿಳಿದುಕೊಳ್ಳಬೇಕಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Operation Sindhoora, Rahul Gandhi Questions Modi Government, Becomes a Hero on Pakistani TV After Siddaramaiah. In the aftermath of the Indian Army’s Operation Sindhoora, Congress leader Rahul Gandhi has launched a sharp attack on the Modi government, raising critical questions about its handling of national security and foreign policy. His comments have sparked intense political debate across India, while also gaining significant attention across the border.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm