ಬ್ರೇಕಿಂಗ್ ನ್ಯೂಸ್
20-05-25 02:36 pm HK News Desk ದೇಶ - ವಿದೇಶ
ನವದೆಹಲಿ, ಮೇ 20 : ಪಾಕಿಸ್ತಾನದ ಪ್ರಜೆಗಳನ್ನು ಹಿಂದಕ್ಕಟ್ಟಲು ಕ್ರಮ ಕೈಗೊಂಡ ಬೆನ್ನಲ್ಲೇ ಅಕ್ರಮ ಬಾಂಗ್ಲಾ ವಲಸಿಗರ ಮೇಲೂ ಕೇಂದ್ರ ಕಣ್ಣಿಟ್ಟಿದೆ. ಇದಕ್ಕಾಗಿ ಮುಂದಿನ 30 ದಿನಗಳಲ್ಲಿ ಅಕ್ರಮ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ವಲಸಿಗರನ್ನು ಗುರುತಿಸಿ ಗಡೀಪಾರು ಮಾಡಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆಗಳನ್ನು ರಚಿಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ನಿರ್ದೇಶನ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯಾಚರಣೆ ನಡೆಸಲು ರಾಜ್ಯ ಸರ್ಕಾರಗಳಿಗೆ ಮುಕ್ತ ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರಗಳು ರಚಿಸಿದ ಈ ವಿಶೇಷ ಕಾರ್ಯಪಡೆಗಳು ಅಕ್ರಮ ವಲಸಿಗರ ಸಮಗ್ರ ವಿವರಗಳನ್ನು ಸಂಗ್ರಹಿಸಬೇಕು. ವಲಸಿಗರ ಹೆಸರು, ಪೋಷಕರು, ವಿಳಾಸ, ಸಂಬಂಧಿಕರು ಸೇರಿದಂತೆ ಇತರ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಬೇಕು.
ಅಕ್ರಮ ವಲಸಿಗರೆಂದು ದೃಢಪಟ್ಟ ನಂತರ, ಬಯೋಮೆಟ್ರಿಕ್ ಮತ್ತು ಜನಸಂಖ್ಯಾ ವಿವರಗಳನ್ನು ದಾಖಲಿಸಿ ವಿದೇಶಿಯರ ಗುರುತಿನ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕೆಂದು ಸಚಿವಾಲಯ ಸೂಚನೆ ನೀಡಿದೆ.
30 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡ ನಂತರ, ಅಕ್ರಮ ವಲಸಿಗರನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್), ಅಸ್ಸಾಂ ರೈಫಲ್ಸ್ ಅಥವಾ ಭಾರತೀಯ ಕರಾವಳಿ ಕಾವಲು ಪಡೆಗೆ ಹಸ್ತಾಂತರಿಸಲಾಗುತ್ತದೆ. ನಂತರ ಈ ಪಡೆಗಳು ಅವರನ್ನು ಅವರ ಮೂಲ ದೇಶದ ಅಧಿಕಾರಿಗಳಿಗೆ ವರ್ಗಾಯಿಸುವ ಮೂಲಕ ಅವರನ್ನು ಗಡೀಪಾರು ಮಾಡುತ್ತಾರೆಂದು ಮಾಹಿತಿ ನೀಡಿದೆ.
ರಾಷ್ಟ್ರೀಯ ಭದ್ರತೆ ಮತ್ತು ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳಲ್ಲಿ ವಿದೇಶಿ ಪಾತ್ರದ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ.
The Union Ministry of Home Affairs (MHA) has imposed a 30-day limit for states and Union Territories (UT) to authenticate the identities of individuals suspected to be unlawful immigrants from Bangladesh and Myanmar asserting to be Indian citizens. Indian Express reported that following this one-month timeframe if their paperwork is not confirmed, they will be subject to deportation.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm