ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm