ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm