ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm