ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 07:17 pm
Mangalore Correspondent
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm