ಬ್ರೇಕಿಂಗ್ ನ್ಯೂಸ್
22-05-25 05:43 pm HK News Desk ದೇಶ - ವಿದೇಶ
ನವದೆಹಲಿ, ಮೇ 22 : 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ದೆಹಲಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಈ ನಿಯೋಗದಲ್ಲಿದ್ದಾರೆ. ಈ ನಿಯೋಗವು ಮೊದಲು ರಷ್ಯಾ ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ (ಮೇ 25), ಗ್ರೀಸ್ (ಮೇ 27), ಲಾಟ್ವಿಯಾ (ಮೇ 29) ಮತ್ತು ಸ್ಪೇನ್ಗೂ (ಮೇ 31) ಭೇಟಿ ನೀಡಲಿದ್ದಾರೆ. ಇದಲ್ಲದೆ, ಶಶಿ ತರೂರ್ ಸೇರಿ ಏಳು ಸಂಸದರ ನೇತೃತ್ವದಲ್ಲಿ ಪ್ರತ್ಯೇಕ ಏಳು ತಂಡಗಳು ಜಗತ್ತಿನ ವಿವಿಧ ದೇಶಗಳಿಗೆ ಹೊರಟಿದೆ.

ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮದ ಜತೆಗೆ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ, " ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ ಭಯೋತ್ಪಾದನೆ ವಿರುದ್ಧ ಅದರಲ್ಲೂ ನಿರ್ದಿಷ್ಟವಾಗಿ ಪಾಕಿಸ್ತಾನ ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿರುವುದು ಹಾಗು ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ.
ಪ್ರಧಾನಮಂತ್ರಿ ಮೋದಿ ಅವರ ಸಂದೇಶದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲ, ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ನಮ್ಮ ಸರ್ವಪಕ್ಷ ನಿಯೋಗವು ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕತೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ" ಎಂದು ಹೇಳಿದ್ದಾರೆ.
Seven Party Delegation Leaves for Abroad, Proud to Convey India’s Message to the World says Mangalore MP Brijesh Chowta.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm