ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm