ಬ್ರೇಕಿಂಗ್ ನ್ಯೂಸ್
25-05-25 02:14 pm HK News Desk ದೇಶ - ವಿದೇಶ
ಕೊಚ್ಚಿ, ಮೇ.25: ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲುಪಡೆಯ ಪ್ರಯತ್ನ ಹೊರತಾಗಿಯೂ ಕೊಚ್ಚಿ ಬಳಿಯ ಸಮುದ್ರ ಮಧ್ಯದಲ್ಲಿ ಬೃಹತ್ ಕಂಟೇನರ್ ಹಡಗೊಂದು ಮುಳುಗಡೆಯಾಗಿದೆ. ಕೋಸ್ಟ್ ಗಾರ್ಡ್ ಹಡಗು ICGS ಸಕ್ಷಮ್ ಮೂಲಕ ಹಡಗಿನ ರಕ್ಷಣೆಗಾಗಿ ಮತ್ತು ತೈಲ ಸೋರಿಕೆಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿತ್ತು. ಸರಕುಗಳನ್ನು ಹೊಂದಿದ್ದ ಕಂಟೇನರ್ ಹಡಗು ಶನಿವಾರ ಮಧ್ಯಾಹ್ನದ ವೇಳೆಗೆ 26 ಡಿಗ್ರಿಗಳಷ್ಟು ವಾಲಿತ್ತು.
ಹಡಗಿನಲ್ಲಿ 24 ಮಂದಿ ಸಿಬ್ಬಂದಿ ಇದ್ದರು. ಈ ಪೈಕಿ 21 ಜನರನ್ನು ನಿನ್ನೆ ಸಂಜೆ ಕರಾವಳಿ ಕಾವಲು ಪಡೆ ರಕ್ಷಿಸಿತ್ತು. ಹಡಗು ಮುಳುಗಲು ಪ್ರಾರಂಭಿಸುತ್ತಿದ್ದಂತೆ ನೌಕಾಪಡೆ ಉಳಿದ ಮೂವರನ್ನು ಇಂದು ಬೆಳಗ್ಗೆ ರಕ್ಷಿಸಿ ಸ್ಥಳಾಂತರಿಸಿತು. ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೊಚ್ಚಿಯ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದು, ಕ್ಯಾಪ್ಟನ್ ಮತ್ತು ಇಬ್ಬರು ಎಂಜಿನಿಯರ್ಗಳನ್ನು ಕೊಚ್ಚಿ ನೌಕಾ ನೆಲೆಗೆ ಕರೆದೊಯ್ಯಲಾಗಿದೆ. ಮಾಹಿತಿ ಪ್ರಕಾರ, ಹಡಗು 640 ಕಂಟೇನರ್ ಗಳನ್ನು ಹೊತ್ತೊಯ್ಯುತ್ತಿತ್ತು. ಅಲ್ಲದೆ, 13 ಕಂಟೇನರ್ ಗಳಲ್ಲಿ ಅತ್ಯಂತ ಕಲುಷಿತ ರಾಸಾಯನಿಕಗಳಿದ್ದವು. 84 ಟನ್ ಡೀಸೆಲ್ ಹಾಗೂ 367 ಮೆಟ್ರಿಕ್ ಟನ್ ಫರ್ನೆನ್ಸ್ ಆಯಿಲ್ ಇತ್ತು. ಮಳೆ ಮತ್ತು ಪ್ರವಾಹದಿಂದಾಗಿ ಅವುಗಳೀಗ ಕೇರಳ ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕಡಲ ತೀರ ಮಾಲಿನ್ಯಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಆತಂಕಗೊಂಡಿದ್ದು ಕೇರಳ ಸರ್ಕಾರ ಮುನ್ನೆಚ್ಚರಿಕೆಯನ್ನೂ ವಹಿಸಿದೆ.




1997 ರಲ್ಲಿ ನಿರ್ಮಿಸಲಾದ ಲೈಬೀರಿಯಾ ಮೂಲದ ಕಂಟೇನರ್ ಹಡಗು MSC ಎಲ್ಸಾ, 184 ಮೀಟರ್ ಉದ್ದ ಮತ್ತು 25.3 ಮೀಟರ್ ಅಗಲವಾಗಿತ್ತು. ತಾಂತ್ರಿಕ ತಜ್ಞರನ್ನು ಹೊತ್ತ ಹಡಗನ್ನು ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸಲಾಗಿತ್ತು, ಆದರೆ ಸರಕುಗಳನ್ನು ಸ್ಥಳಾಂತರಿಸಲು ಅಥವಾ ಹಡಗನ್ನು ಎಳೆದು ತರಲು ಸಾಧ್ಯವಾಗಲಿಲ್ಲ. ಹೀಗಾಗಿ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆ ಕೈಬಿಟ್ಟಿದೆ.
Mangalore Massive Container Ship Sinks Near Kochi, 640 Containers and 80 Tons of Diesel Spill into Sea, 24 Crew Rescued.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm